ಕತ್ತಲ ಕೋಣೆಯಲ್ಲಿ ಬೆತ್ತಲಾಗುತ್ತಿದ್ದ ಡೋಂಗಿ ಬಾಬಾ ಇದೀಗ ಪೊಲೀಸರ ಅತಿಥಿ

Public TV
1 Min Read

ಮಡಿಕೇರಿ: ಮೂರು ತಿಂಗಳ ಹಿಂದೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೊಂಡಂಗೇರಿ ಗ್ರಾಮಕ್ಕೆ ಆಗಮಿಸಿದ ಡೋಂಗಿ ಬಾಬಾ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಈ ಡೋಂಗಿ ಬಾಬಾ ಇಕ್ಬಾಲ್ ಬಾಬಾ ಎಂದು ತನ್ನನ್ನು ಪರಿಚಯ ಮಾಡಿಕೊಂಡು ಬಾಡಿಗೆ ಕಟ್ಟಡವೊಂದರಲ್ಲಿ ತನ್ನ ಕಾರ್ಯ ಚಟುವಟಿಕೆ ಪ್ರಾರಂಭಿಸಿದ್ದ. ಕತ್ತಲು ಕವಿದ ಅಮಾಯಕರ ಬಾಳಿನಲ್ಲಿ ಬೆಳಕು ಚೆಲ್ಲುತ್ತೇನೆಂದು ಬೊಗಳೆ ಬಿಡುತ್ತಾ ಕತ್ತಲ ಕೋಣೆಯೊಂದರಲ್ಲಿ ಕುಳಿತು ಮಂತ್ರ ಮತ್ತು ಮೈ ಸವರುವ ತಂತ್ರ ಶುರುವಚ್ಚಿಕೊಂಡಿದ್ದ. ಮಹಿಳಾ ಗಿರಾಕಿಗಳೇ ಹೆಚ್ಚಾಗಿರುವ ಬಾಬಾ ತನ್ನ ಕತ್ತಲ ಕೋಣೆಯಲ್ಲಿ ಬೆತ್ತಲಾಗುತ್ತಿದ್ದಾನೆ ಎಂಬುವುದನ್ನರಿತ ಕೊಂಡಂಗೇರಿ ನಿವಾಸಿಗಳು, ಆತನ ಅರಮನೆ ಒಳಹೊಕ್ಕಾಗ ಬಾಬಾನ ಬೆತ್ತಲೆ ರಹಸ್ಯ ಬಯಲಾಗಿದೆ. ಬಳಿಕ ಬಾಬಾನನ್ನು ಹಿಡಿದು ಹಿಗ್ಗಾ-ಮುಗ್ಗಾ ಥಳಿಸಿದ ಗ್ರಾಮಸ್ಥರು ಆತನನ್ನು ಸಿದ್ದಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ.

ನಮ್ಮ ದೇಶದಲ್ಲಿ ಮೂಢ ನಂಬಿಕೆಗಳ ಬೇರು ಗಟ್ಟಿ ಇರುವವರೆಗೂ ಬಾಬಾ ರಾಮ-ರಹೀಮರಂತಹ ಕಾಮುಕ ಮರಗಳು ಬೃಹದಾಕಾರವಾಗಿ ಬೆಳೆಯುತ್ತಿರುತ್ತವೆ. ಆದ್ದರಿಂದ ಇಂತಹ ಬಾಬಾರನ್ನು ಮೊಳಕೆಯಲ್ಲಿಯೇ ಚಿವುಟಬೇಕಾದ ಅನಿವಾರ್ಯತೆ ಇದೆ. ಅದನ್ನು ಮಾಡಿಸಬೇಕು ಅಂತ ಕೊಂಡಂಗೇರಿ ಗ್ರಾಮಸ್ಥರು ಹೇಳಿದ್ದಾರೆ.

ಸದ್ಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *