ಮದ್ವೆ ಮುಗಿಸಿ ಬರುತ್ತಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
1 Min Read

ಚಂಡೀಗಢ: ಮದುವೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಒಂದೇ ಕುಟುಂಬದ ನಾಲ್ವರು ಅಪಘಾತದಲ್ಲಿ ಮೃತಪಟ್ಟ ಘಟನೆ ಪಂಜಾಬ್‌ನ ಪರ‍್ಯಾಲಿಯಲ್ಲಿ ನಡೆದಿದೆ.

ಸುನಂ-ಭವಾನಿಗಡ ಮಾರ್ಗದಲ್ಲಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಪತಿ-ಪತ್ನಿ ಸೇರಿದಂತೆ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಾಲ್ವರು ಮದುವೆ ಕಾರ್ಯಕ್ರಮ ಮುಗಿಸಿ ಹಿಂದಿರುಗುತ್ತಿದ್ದರು ಎಂದು ಹೇಳಲಾಗುತ್ತಿದೆ.

ಚಾಲಕ ಕೆಟ್ಟು ನಿಂತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸದ್ಯ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಲ್ಲದೆ ಈ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ.

ಅಪಘಾತದಲ್ಲಿ ಪತಿ, ಪತ್ನಿ, ಅವರ ಮಗ ಹಾಗೂ ಮೊಮ್ಮಗಳು ಪ್ರಯಾಣಿಸುತ್ತಿದ್ದರು. ಮೃತಪಟ್ಟ ವ್ಯಕ್ತಿಯನ್ನು ಹರೀಶ್ ಅದಾಲ್ಕಾ ಎಂದು ಗುರುತಿಸಲಾಗಿದ್ದು, ಇವರು ಬಟ್ಟೆ ವ್ಯಾಪಾರ ಮಾಡುತ್ತಿದ್ದರು. ಸೋಮವಾರ ರಾತ್ರಿ ನಾಲ್ವರು ಭವಾನಿಗಡದಲ್ಲಿ ನಡೆದ ಮದುವೆ ಕಾರ್ಯಕ್ರಮದಿಂದ ಹಿಂದಿರುಗುತ್ತಿದ್ದರು ಎನ್ನಲಾಗಿದೆ.

ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *