ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ನಿಧನ: ಅಭಿಮಾನಿಗಳ ಕಂಬನಿ

Public TV
1 Min Read

ಬಾಲಿವುಡ್ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ (Raju Srivastav) ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ದೆಹಲಿಯ (Delhi) ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಕೋಮಾದಲ್ಲಿ ಇದ್ದರು. ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ (death) ತ್ಯಜಿಸಿದ್ದಾರೆ. ಆಗಸ್ಟ್ 10ರಂದು ಅವರನ್ನು ದೆಹಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜಿಮ್ ನಲ್ಲಿ (Gym) ವ್ಯಾಯಾಮ ಮಾಡುತ್ತಿರುವಾಗ ರಾಜು ಕೆಳಗೆ ಬಿದ್ದು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಈವರೆಗೂ ಅವರಿಗೆ ಪ್ರಜ್ಞೆ ಮರಳಿ ಬರಲೇ ಇಲ್ಲ. ವೈದ್ಯರು ತಮ್ಮೆಲ್ಲ ಪ್ರಯತ್ನಗಳನ್ನು ಮಾಡಿದರೂ, ರಾಜು ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ:ಯೂಟ್ಯೂಬ್‌ನಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಉಪ್ಪಿ- ಕಿಚ್ಚ ನಟನೆಯ ‘ಕಬ್ಜ’ ಟೀಸರ್

ರಾಜು ಹಲವಾರು ವರ್ಷಗಳಿಂದ ಬಾಲಿವುಡ್ ನಲ್ಲಿ ನಟರಾಗಿ ಗುರುತಿಸಿಕೊಂಡಿದ್ದಾರೆ. ಅಲ್ಲದೇ, ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೇಂಜ್’ ಹಾಸ್ಯ ಕಾರ್ಯಕ್ರಮದ ಮೂಲಕ ಅಪಾರ ಅಭಿಮಾನಿಗಳನ್ನು ಇವರು ಹೊಂದಿದ್ದರು. ಅಲ್ಲದೇ, ಬಾಜಿಗರ್, ಬಾಂಬೆ ಟು ಗೋವಾ, ಮೈನೆ ಪ್ಯಾರ್ ಕಿಯಾ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ನಟರಾಗಿಯೂ ಕಾಣಿಸಿಕೊಂಡಿದ್ದಾರೆ. ರಾಜು ನಿಧನಕ್ಕೆ ಬಾಲಿವುಡ್ (Bollywood) ಕಂಬನಿ ಮಿಡಿದಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *