ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾದ ಖ್ಯಾತ ಗಾಯಕಿ ಬಾಂಬೆ ಜಯಶ್ರೀ

Public TV
1 Min Read

ಖ್ಯಾತ ಗಾಯಕಿ ಬಾಂಬೆ ಜಯಶ್ರೀ (Bombay Jayashree) ಪ್ರಜ್ಞಾಹೀನ (Unconscious) ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬ್ರಿಟನ್ (Britain) ದೇಶದ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ಅವರಿಗೆ ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ಉಳಿದುಕೊಂಡಿದ್ದ ಹೋಟೆಲ್ ನಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು ಎಂದು ಹೇಳಲಾಗುತ್ತಿದೆ. ಕೂಡಲೇ ಅವರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಪ್ತ ಮೂಲಗಳ ಪ್ರಕಾರ ಬಾಂಬೆ ಜಯಶ್ರೀ ಅವರು ಶಸ್ತ್ರ ಚಿಕಿತ್ಸೆಗೆ ಒಳಲಾಗಿದ್ದು, ಶಸ್ತ್ರ ಚಿಕಿತ್ಸೆ ಯಶಸ್ಸಿಯಾಗಿ ನೆರವೇರಿದೆ ಎಂದು ಹೇಳಲಾಗುತ್ತಿದೆ.  ನಿನ್ನೆ ರಾತ್ರಿಯೇ ಬಳಲಿದಂತೆ ಕಂಡು ಬಂದಿದ್ದ ಅವರು, ತೀವ್ರ ಕುತ್ತಿಗೆ ನೋವಿನ ಬಗ್ಗೆಯೂ ಮಾತನಾಡಿದ್ದರು ಎಂದು ಆಪ್ತರು ತಿಳಿಸಿದ್ದಾರೆ. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

ಇಂದು ಬೆಳಗ್ಗೆ ಉಪಹಾರ ಮತ್ತು ಊಟಕ್ಕೆ ಜಯಶ್ರೀ ಅವರು ಬಾರದೇ ಹೋದಾಗ, ಹೋಟೆಲ್ ಕೋಣೆಗೆ ಹೋಗಿ ನೋಡಿದಾಗ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಚಿಕಿತ್ಸೆಯ ನಂತರ ಅವರನ್ನು ಚೆನ್ನೈಗೆ ಕರೆತರಲಾಗುತ್ತಿದೆ ಎನ್ನುವ ಮಾಹಿತಿ ಇದೆ.

ಜಯಶ್ರೀ ಹೆಸರಾಂತ ಕರ್ನಾಟಕಿ ಗಾಯಕಿ. ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಹಾಡಿದ್ದಾರೆ. ಸಾಕಷ್ಟು ಕಾರ್ಯಕ್ರಮಗಳನ್ನೂ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕಾಗಿಯೇ ಅವರು ಬ್ರಿಟನ್ ದೇಶದ ಪ್ರವಾಸದಲ್ಲಿ ಇದ್ದರು. ಪದ್ಮಶ್ರೀ ಸೇರಿದಂತೆ ಹಲವು ಪುರಸ್ಕಾರಗಳು ಅವರನ್ನು ಹುಡುಕಿಕೊಂಡು ಬಂದಿವೆ.

Share This Article
Leave a Comment

Leave a Reply

Your email address will not be published. Required fields are marked *