ಹಾಲು ಅಂತ ಮೊಸರು ಕದ್ದು ತಂದು ನಿರ್ಮಾಪಕರ ಕಾರಿಗೆ ಅಭಿಷೇಕ ಮಾಡಿದ್ರು ಅಭಿಮಾನಿಗಳು!

Public TV
2 Min Read

ಮುಂಬೈ: ಸಿನಿಮಾ ತಾರೆಯರು ಎಂದರೆ ಅಭಿಮಾನಿಗಳಿಗೆ ಸಖತ್ ಕ್ರೇಜ್‌ ಇರುತ್ತದೆ. ನಟ, ನಟನಿಯರ ಜೊತೆಗೆ ಫೊಟೋ ತೆಗೆಸಿಕೊಳ್ಳುವುದು, ನೆಚ್ಚಿನ ತಾರೆಯರ ಸಿನಿಮಾ ರಿಲೀಸ್ ಆದಾಗ ಹೀರೋ ಕಟೌಟ್‌ಗೆ ಹಾಲಿನ ಅಭಿಷೇಕ ಮಾಡುತ್ತಾರೆ. ಆದರೆ ನಿರ್ಮಾಪಕನ ಕಾರಿಗೆ ಮೊಸರಿನ ಅಭಿಷೇಕ ಮಾಡಿರುವ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ಕಾಲಿವುಡ್ ಖ್ಯಾತ ನಟ ಅಜಿತ್ ಕುಮಾರ್ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ  ಕಾರಿಗೆ ಮೊಸರಿನ ಅಭಿಷೇಕ ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

ವಲಿಮೈ ಸಿನಿಮಾ ಬಿಡುಗಡೆ ಆಗಿದೆ. ಜನರ ಪ್ರತಿಕ್ರಿಯೆ ಹೇಗಿದೆ ಎಂದು ತಿಳಿದುಕೊಳ್ಳಲು ಚಿತ್ರಮಂದಿರಕ್ಕೆ ಬಂದಿದ್ದ ಬೋನಿ ಕಪೂರ್ ಅವರ ಕಾರಿನ ಮೇಲೆ ಅಭಿಮಾನಿಗಳು ಮೊಸರಿನ ಅಭಿಷೇಕ ಮಾಡಿದ್ದಾರೆ. ಈ ವೀಡಿಯೋ ವೈರಲ್ ಆಗಿದೆ. ಈ ಮೊಸರನ್ನು ಅಭಿಮಾನಿಗಳು ಯಾವುದೋ ಅಂಗಡಿಯಿಂದ ಕದ್ದು ತಂದಿದ್ದು ಎಂಬ ಮಾಹಿತಿ ಕೂಡ ಕೇಳಿಬಂದಿದೆ. ಆ ಸಂದರ್ಭದಲ್ಲಿ ಅವರ ಮೇಲೆ ಯಾರೋ ಕಿಡಿಗೇಡಿಗಳು ಪೆಟ್ರೋಲ್​ ಬಾಂಬ್​ ಎಸೆದಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ:  ಉಕ್ರೇನ್ ನಲ್ಲಿ ಸಿಲುಕಿಕೊಂಡ ನಟಿ ಶ್ವೇತಾ ಚೆಂಗಪ್ಪ ಗೆಳತಿ

ಬಹಳ ತಿಂಗಳಿಂದಲೂ ವಲಿಮೈ ಸಿನಿಮಾ ನಿರೀಕ್ಷೆ ಮೂಡಿಸಿತ್ತು. ಪದೇಪದೇ ರಿಲೀಸ್ ಡೇಟ್ ಬದಲಾಗುತ್ತಲೇ ಇತ್ತು. ಕೊನೆಗೂ ಫೆ.24ರಂದು ಸಿನಿಮಾ ಬಿಡುಗಡೆ ಆಯಿತು. ಗುರುವಾರ ಬಿಡುಗಡೆ ಆಗಿರುವ ವಲಿಮೈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಅಜಿತ್ ನಟಿಸಿದ್ದಾರೆ.  ಇದನ್ನೂ ಓದಿ : ರಾಮ್ ಗೋಪಾಲ್ ವರ್ಮಾ ಭೇಟಿ ಮಾಡಿ ಕುತೂಹಲ ಮೂಡಿಸಿದ ಉಪ್ಪಿ

ಸ್ಟಾರ್ ನಟರ ಸಿನಿಮಾಗಳು ಬಿಡುಗಡೆ ಆದಾಗ ಅವರ ಕಟೌಟ್‌ಗಳಿಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡುತ್ತಾರೆ. ಅಜಿತ್ ಫ್ಯಾನ್ಸ್ ಕೂಡ ಅದೇ ಪ್ಲ್ಯಾನ್ ಹಾಕಿಕೊಂಡಿದ್ದರು. ಆದರೆ ದುಡ್ಡು ಕೊಟ್ಟು ಹಾಲು ಖರೀದಿಸುವ ಬದಲು ಯಾವುದೋ ಅಂಗಡಿಯಲ್ಲಿ ಕಳ್ಳತನ ಮಾಡಿ ತಂದಿದ್ದಾರೆ. ನಗೆಪಾಟಲಿನ ಸಂಗತಿ ಏನೆಂದರೆ, ಹಾಲಿನ ಬದಲಾಗಿ ಮೊಸರಿನ ಪ್ಯಾಕೆಟ್ ಕದ್ದು ತಂದು ನಿರ್ಮಾಪಕ ಬೋನಿ ಕಪೂರ್ ಅವರ ಕಾರಿನ ಮೇಲೆ ಸುರಿದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *