ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡುವಂತೆ ಅಭಿಮಾನಿಗಳಿಂದ ಪೋಸ್ಟ್

Public TV
1 Min Read

ಬಳ್ಳಾರಿ: ಸುಪ್ರೀಂ ಕೋರ್ಟಿನಿಂದ ಮಧ್ಯಂತರ ಆದೇಶ ಪ್ರಕಟವಾಗುತ್ತಿದ್ದಂತೆ ಬಿಜೆಪಿ ನಾಯಕರು ಸರ್ಕಾರ ರಚಿಸುವ ಕನಸು ಕಾಣುತ್ತಿದ್ದಾರೆ. ಈ ಮಧ್ಯೆ ಸರ್ಕಾರ ರಚನೆಯಾದರೆ ವಾಲ್ಮೀಕಿ ಸಮುದಾಯದ ಪ್ರಭಾವಿ ನಾಯಕ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಶಾಸಕ ಶ್ರೀರಾಮುಲುಗೆ ಡಿಸಿಎಂ ಪಟ್ಟ ನೀಡುವಂತೆ ಅಭಿಮಾನಿಗಳಿಂದ ಪೋಸ್ಟ್ ಅಭಿಯಾನ ಶುರುವಾಗಿದೆ.

ಬಳ್ಳಾರಿಯಲ್ಲಿ ಶಾಸಕ ಶ್ರೀರಾಮುಲು ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಅಭಿಯಾನ ಶುರುವಾಗಿದ್ದು, ಗುರುವಾರ ರಾಜ್ಯ ಸಮ್ಮಿಶ್ರ ಸರ್ಕಾರ ಬಹುಮತ ಸಾಬೀತು ಮಾಡಲು ವಿಫಲವಾಗುತ್ತದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎನ್ನುವ ವಿಶ್ವಾಸವನ್ನು ಬಿಜೆಪಿಗರು ವ್ಯಕ್ತಪಡಿಸಿದ್ದಾರೆ.

2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಶ್ರೀರಾಮುಲು ಸಂಸದರಾಗಿದ್ದರು. ಬಳಿಕ ಶ್ರೀರಾಮುಲು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿ ಚಿತ್ರದುರ್ಗದ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ರಾಜ್ಯದ ಪ್ರಭಾವ ಬಿಜೆಪಿ ನಾಯಕರಾಗಿರುವ ಶ್ರೀರಾಮುಲು ಅವರನ್ನು ಡಿಸಿಎಂ ಮಾಡುವಂತೆ ಅಭಿಮಾನಿಗಳು ಪಟ್ಟು ಹಿಡಿದಿದ್ದರು. ಆದರೆ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಅಭಿಮಾನಿಗಳ ಆಸೆ ಕಮರಿ ಹೋಗಿತ್ತು. ಆದರೆ ಈಗ ಸುಪ್ರೀಂ ಕೋರ್ಟ್ ತೀರ್ಪು ಬಂದ ತಕ್ಷಣ ಅಭಿಮಾನಿಗಳ ಕನಸು ಮತ್ತೆ ಮೊಳಕೆಯೊಡೆದಿದೆ.

ಶಾಸಕ ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿ ಮಾಡಲು ಎಲ್ಲಾ ಗ್ರೂಪ್‍ಗಳಿಗೆ ಶೇರ್ ಮಾಡುವಂತೆ ಶ್ರೀರಾಮುಲು ಬೆಂಬಲಿಗರು ಪೋಸ್ಟ್ ಹಾಕುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *