ಸಾಲಬಾಧೆ ತಾಳಲಾರದೆ ಮಗನೊಂದಿಗೆ ರೈತ ಆತ್ಮಹತ್ಯೆ!

Public TV
1 Min Read

ಹಾವೇರಿ: ಸಾಲಬಾಧೆ ತಾಳಲಾರದೆ ಆರು ವರ್ಷದ ಮಗನೊಂದಿಗೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ತಾಲೂಕಿನ ಶಂಕರಿಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ರೈತ ಮಂಜಪ್ಪ ಕಲ್ಲಮ್ಮನವರ (40)ಮತ್ತು ಮಗ ಲಿಂಗರಾಜ್(6) ಗುರುತಿಸಲಾಗಿದೆ. ಮಂಜಪ್ಪ ಇಪ್ಪತ್ತೈದು ಎಕರೆ ಜಮೀನು ಹೊಂದಿದ್ದರು. ಬ್ಯಾಂಕ್ ಮತ್ತು ಕೈ ಸಾಲ ಅಂತಾ ಇಪ್ಪತ್ತು ಲಕ್ಷ ರುಪಾಯಿ ಸಾಲ ಮಾಡಿಕೊಂಡಿದ್ದರು. ಕಳೆದ ಎರಡು ಮೂರು ವರ್ಷಗಳಿಂದ ಬೆಳೆದ ಬೆಳೆ ಕೈಗೆ ಬಂದಿರಲಿಲ್ಲ.

ಕಳೆದೆರಡು ವರ್ಷಗಳಿಂದ ಕ್ಯಾಬೇಜ್ ಬೆಳೆ ಕೈ ಕೊಟ್ಟಿದ್ದರಿಂದ ಬೇಸತ್ತು ಕೃಷಿ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹಾವೇರಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *