ಭತ್ತ ಕಟಾವು ಮಾಡಿದ್ದಾಯ್ತು, ಕಬ್ಬು ಸುಲಿಯೋಕೆ ಬನ್ನಿ: ಸಿಎಂಗೆ ಸವಾಲು ಹಾಕಿದ ರೈತ ಮಹಿಳೆ ಜಯಶ್ರೀ

Public TV
1 Min Read

ಬೆಳಗಾವಿ: ಸಿಎಂ ಅವರೇ ಭತ್ತ ಕಟಾವು, ನಾಟಿ ಮಾಡಿದ್ದಾಯಿತು. ಈಗ ಕಬ್ಬು ಸುಲಿಯಲು ಬನ್ನಿ ಎನ್ನುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರಿಗೆ ರೈತ ಮಹಿಳೆ ಜಯಶ್ರೀ ಗುರಣ್ಣನವರ್ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ಇಂದು ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿ ಎದುರು ಕಬ್ಬು ಬೆಳೆಗಾರರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದರು. ಈ ವೇಳೆ ಮಾತನಾಡಿದ ಜಯಶ್ರೀ, ನಾವು ರೈತರೇ ಅಲ್ಲ ಅನ್ನುವ ನೀವು, ನನ್ನ ಹೇಳಿಕೆಯನ್ನು ಸವಾಲನ್ನಾಗಿ ಸ್ವೀಕರಿಸಿದರೂ ಪರವಾಗಿಲ್ಲ. ನಾವು ಭತ್ತ ನಾಟಿದ್ದೇವೆ. ಕಟಾವು ಸಹ ಮಾಡಿದ್ದೇವೆ. ಆದರೆ ಈಗ ನೀವು ಕಬ್ಬು ಸುಲಿಯೋಕೆ ಬನ್ನಿ ಎಂದು ಪಂಥಾಹ್ವಾನ ನೀಡಿದ್ದಾರೆ.

ಕಬ್ಬು ಸುಲಿಯುವುದಕ್ಕೆ ನೀವೇ ಸ್ಥಳವನ್ನು ನಿಗದಿ ಮಾಡಿ. ಇಲ್ಲವೇ ನಾವು ನಿಗದಿ ಮಾಡಿದ ಜಾಗಕ್ಕೆ ಬಂದು ಕಬ್ಬು ಸುಲಿಯಿರಿ ಎಂದು ಬಹಿರಂಗವಾಗಿಯೇ ಸವಾಲು ಹಾಕಿದ್ದಾರೆ.

ಪ್ರತಿಭಟನೆ ವಾಪಸ್:
ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ರೈತ ಮುಖಂಡರಾಗಿರುವ ಕೋಡಿಹಳ್ಳಿ ಚಂದ್ರಶೇಖರ್, ಬೆಳಗಾವಿ ಜಿಲ್ಲೆಯ ಕೆಂಡಸಕೊಪ್ಪದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂತೆಗೆದುಕೊಂಡಿದ್ದಾರೆ. ಸರ್ಕಾರ ರೈತರ ಬೇಡಿಕೆಗಳನ್ನು ಪೂರೈಸಲು ಬದ್ಧವಾಗಿದೆ. ಫೆಬ್ರವರಿ ತಿಂಗಳೊಳಗಾಗಿ ಬೇಡಿಕೆ ಈಡೇರಿಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಮಾತು ಕೊಟ್ಟಿದ್ದಾರೆ. ಕಬ್ಬು ಬಿಲ್ ಬಾಕಿ ಹಾಗೂ ಬೆಂಬಲ ಬೆಲೆ ಹಾಗೂ ಭತ್ತಕ್ಕೆ ಎಮ್‍ಎಸ್‍ಪಿ ನಿಯಮದಂತೆ ಯೋಗ್ಯ ದರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಫೆಬ್ರವರಿ ಒಳಗೆ ಸಿಎಂ ಹೇಳಿದ ಹಾಗೆ ನಡೆದುಕೊಳ್ಳದೇ ಇದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *