Chitradurga| ರೈತರ ತಂಟೆಗೆ ಬಂದ್ರೆ ಸುಮ್ಮನೆ ಕೂರಲ್ಲ – ವಕ್ಫ್ ವಿರುದ್ಧ ಭಾರತೀಯ ಕಿಸಾನ್ ಸಂಘ ಪ್ರತಿಭಟನೆ

Public TV
1 Min Read

ಚಿತ್ರದುರ್ಗ: ವಕ್ಫ್ (Waqf Board) ನಡೆ ಖಂಡಿಸಿ ಭಾರತೀಯ ಕಿಸಾನ್ ಸಂಘ (Bharatiya Kisan Sangh) ಹಾಗೂ ವಿವಿಧ ಸಂಘಟನೆಗಳು ಚಿತ್ರದುರ್ಗದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದೆ.

ಕಿಸಾನ್ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರೈತರು, ಮಠಾಧೀಶರ ಭೂಮಿ ಕಬಳಿಸುತ್ತಿರುವ ವಕ್ಫ್ ವಿರುದ್ಧ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರ ಹಾಗೂ ವಕ್ಫ್ ಬೋರ್ಡ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ತುಮಕೂರು| ಗುರಾಯಿಸುತ್ತೀಯಾ ಎಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ವಕ್ಫ್ ಬೋರ್ಡ್ ರೈತರ ತಂಟೆಗೆ ಬಂದರೆ ಸುಮ್ಮನೆ ಕೂರಲ್ಲ ಎಂದು ಸಂಘಟನೆಗಳು ಆಕ್ರೋಶ ಹೊರಹಾಕಿದೆ. ಒನಕೆ ಓಬವ್ವ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ಬಿಜೆಪಿ ಎಂಎಲ್‌ಸಿ ಕೆ.ಎಸ್ ನವೀನ್, ಅಡ್ಡಂಡ ಕಾರ್ಯಪ್ಪ ಸೇರಿದಂತೆ ಸ್ಥಳೀಯ ಹೋರಾಟಗಾರರು ಭಾಗಿಯಾಗಿದ್ದರು. ಇದನ್ನೂ ಓದಿ: ವಕ್ಫ್ ಆಸ್ತಿ ಭೂಕಬಳಿಕೆ ಹೆಚ್ಚಿದ್ದಕ್ಕೆ ಬಿಜೆಪಿಯಿಂದ ಹೆಚ್ಚು ನೋಟಿಸ್ ನೀಡಲಾಗಿದೆ – ಕುಮಾರ್ ಬಂಗಾರಪ್ಪ

Share This Article