ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ಮಾರಣಾಂತಿಕ ಹಲ್ಲೆ

Public TV
0 Min Read

ಕಲಬುರಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಮಣಿಕಂಠ ರಾಠೋಡ್ ಅವರು ಚಿತ್ತಾಪೂರ ಕ್ಷೇತ್ರದ ಬಿಜೆಪಿಯ (BJP Leader) ಪರಾಜಿತ ಅಭ್ಯರ್ಥಿಯಾಗಿದ್ದಾರೆ. ಇವರು ಚಿತ್ತಾಪೂರದಿಂದ ಕಲಬುರಗಿಗೆ ಬರುತ್ತಿರುವಾಗ ಶಹಾಬಾದ ಬಳಿ ಅಪರಿಚಿತರು ದಾಳಿ ಮಾಡಿದ್ದಾರೆ.

ಮಣಿಕಂಠ ರಾಠೋಡ್ ವಾಹನ ತಡೆದು ಬಿಯರ್ ಬಾಟ್ಲಿಗಳಿಂದ ತಲೆಗೆ ಹೊಡೆದು ಪರಾರಿಯಾಗಿದ್ದಾರೆ. ಘಟನೆಯಿಂದ ಮಣಿಕಂಠ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದನ್ನೂ ಓದಿ: ಬಿಗ್‌ಬಾಸ್ ಮನೆಯಿಂದ ಇಶಾನಿ ಔಟ್- ‌ಇಂದು ಇನ್ನೊಬ್ಬರಿಗೆ ಕಾದಿದೆ ಶಾಕ್

Share This Article