ಆಸ್ತಿಗಾಗಿ ತಂದೆ, ತಮ್ಮನಿಂದಲೇ ಅಣ್ಣನ ಕೊಲೆಗೆ ಯತ್ನ

Public TV
1 Min Read

ಕೊಪ್ಪಳ: ಆಸ್ತಿ ವಿಚಾರಕ್ಕೆ ತಂದೆ ಹಾಗೂ ತಮ್ಮನಿಂದಲೇ ಅಣ್ಣನ ಕೊಲೆಗೆ ಯತ್ನ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಅಣ್ಣ ಅನಿಲ್ ಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಚೆನ್ನಪ್ಪಗೌಡ ಹಾಗೂ ವೆಂಕಟೇಶ್ ಆರೋಪಿಗಳು. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ನೆಲಜೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಪಿತ್ರಾರ್ಜಿತ ಆಸ್ತಿ ವಿಚಾರಕ್ಕೆ ಭಾನುವಾರ ತಡರಾತ್ರಿ ತಂದೆ ಮಕ್ಕಳ ನಡುವೆ ಗಲಾಟೆ ನಡೆದಿತ್ತು.

POLICE JEEP

ಗಲಾಟೆ ವಿಕೋಪಕ್ಕೆ ಹೋಗಿತ್ತು. ಆ ವೇಳೆ ಅನಿಲ್ ಮನೆ ಮೇಲೆ ತಂದೆ ಚೆನ್ನಪ್ಪಗೌಡ ಹಾಗೂ ತಮ್ಮ ವೆಂಕಟೇಶ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ. ಅದೃಷ್ಟವಶಾತ್ ಅನಿಲ್ ಕುಮಾರ್ ಹಾಗೂ ಅವರ ಕುಟುಂಬ ಪ್ರಾಣಾಪಾಯದಿಂದ ಪಾರಾಗಿದೆ. ಇದನ್ನೂ ಓದಿ: ಸೋಂಕು ವೇಗವಾಗಿ ಹರಡುತ್ತಿದೆ, ನಾಳೆ ಸಂಜೆ ತಜ್ಞರ ಜೊತೆ ಸಭೆ ಮಾಡುತ್ತೇವೆ: ಬೊಮ್ಮಾಯಿ

ಈ ಬಗ್ಗೆ ಬೇವೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ತಂದೆ ಹಾಗೂ ತಮ್ಮನ ವಿರುದ್ಧ ಅನಿಲ್ ಕುಮಾರ್ ದೂರು ದಾಖಲಿಸಿದ್ದಾರೆ. ಚೆನ್ನಪ್ಪಗೌಡ ಹಾಗೂ ವೆಂಕಟೇಶ್ ಅವರ ಪತ್ತೆಗಾಗಿ ಶೋಧ ನಡೆಯುತ್ತಿದೆ. ಇದನ್ನೂ ಓದಿ: ರಾಜಕೀಯ ಬಿಕ್ಕಟ್ಟು – ಸುಡಾನ್‌ ಪ್ರಧಾನಿ ರಾಜೀನಾಮೆ ಘೋಷಣೆ

Share This Article
Leave a Comment

Leave a Reply

Your email address will not be published. Required fields are marked *