2ನೇ ಮದುವೆಗೆ ಅಡ್ಡಿಯಾಗುತ್ತೆ ಎಂದು 14 ತಿಂಗಳ ಮಗುವನ್ನೇ ಕೊಂದ ಪಾಪಿ ತಂದೆ

Public TV
1 Min Read

ರಾಯಚೂರು: 2ನೇ ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಪಾಪಿ ತಂದೆಯೊಬ್ಬ 14 ತಿಂಗಳ ತನ್ನ ಹಸುಗೂಸನ್ನು ಕೊಂದಿರುವ ಘಟನೆ ರಾಯಚೂರು (Raicur) ಜಿಲ್ಲೆಯ ಲಿಂಗಸುಗೂರು (Lingasur) ತಾಲೂಕಿನ ಕನಸಾವಿ ಗ್ರಾಮದಲ್ಲಿ ನಡೆದಿದೆ.

14 ತಿಂಗಳ ಅಭಿನವ್ ಪಾಪಿ ತಂದೆಯ ಕೈಯಲ್ಲೇ ಪ್ರಾಣ ಬಿಟ್ಟ ನತದೃಷ್ಟ ಮಗು. ತನ್ನ ಮಗುವನ್ನೇ ಕೊಂದು 3 ದಿನ ಕಲ್ಲಿನ ಅಡಿಯಲ್ಲಿ ಮುಚ್ಚಿಟ್ಟ ಪಾಪಿ ತಂದೆ ಮಹಾಂತೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಂದು ಮದುವೆಯಾಗುವ ಆಸೆಯಿಂದ ಮಗುವನ್ನು ಕೊಂದು ಕಲ್ಲಿನ ಅಡಿಯಲ್ಲಿ 3 ದಿನ ಮುಚ್ಚಿಟ್ಟಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

ಪರ ಪುರುಷನೊಂದಿಗೆ ಪತ್ನಿ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ಅನುಮಾನ ಹೊಂದಿದ್ದ ಮಹಾಂತೇಶ್ ಮತ್ತೊಂದು ಮದುವೆಗೆ ತಯಾರಿ ನಡೆಸಿದ್ದ. ಮರು ಮದುವೆಗೆ ಮಗು ಅಡ್ಡಿಯಾಗುತ್ತದೆ ಎಂದು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: 2.5 ಕೋಟಿ ರೂ.ಗೆ ಬೇಡಿಕೆ, ಕೊಡದಿದ್ದರೆ ಎನ್‍ಕೌಂಟರ್ ಬೆದರಿಕೆ – 9 ಪೊಲೀಸರು ಅರೆಸ್ಟ್

ಅನುಮಾನದ ಮೇಲೆ ಪೊಲೀಸರು ಹಂತಕ ತಂದೆಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮೊದಲು ಮಗುವನ್ನು ಸುಟ್ಟು ಹಾಕಿರುವುದಾಗಿ ಮಾಹಿತಿ ನೀಡಿದ್ದ. ಬಳಿಕ ಕಲ್ಲಿನ ಅಡಿ ಮುಚ್ಚಿಟ್ಟ ಮಗುವನ್ನು ತೋರಿಸಿದ್ದಾನೆ. ಘಟನೆ ಹಿನ್ನೆಲೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೈದಿಗಳಿಗೆ ಸೇಬು, ಮೂಸಂಬಿ ಹಣ್ಣಿನಲ್ಲಿ ಗಾಂಜಾ ಸಪ್ಲೈ – ಮೂವರು ಅರೆಸ್ಟ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್