– ಮಗಳನ್ನ ಕೊಂದು ಸಂಬಂಧಿಕರ ಮನೆಗೆ ಹೋಗಿದ್ದಾಳೆಂದು ಕಥೆ ಕಟ್ಟಿದ್ದ
ಲಕ್ನೋ: ಮನೆಯಲ್ಲಿ ಹಣ ಕದಿಯುತ್ತಿದ್ದಳೆಂದು ಕಟುಕ ತಂದೆಯೊಬ್ಬ ತನ್ನ 13 ವರ್ಷದ ಮಗಳನ್ನೇ ಕತ್ತು ಹಿಸುಕಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬುಲಂದ್ಶಹರ್ (UP’s Bulandshahr) ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧ 40 ವರ್ಷದ ಆರೋಪಿ ತಂದೆ ಅಜಯ್ ಶರ್ಮಾನನ್ನ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಸೋನಮ್ (13) ಮೃತಪಟ್ಟ ಮಗಳು. ಇವರು ಬಿಚೌಲಾ ಗ್ರಾಮದ (Bichaula village) ನಿವಾಸಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಲೈಂಗಿಕ ಕಿರುಕುಳ ಕೇಸ್ ದಾಖಲಾಗುತ್ತಿದ್ದಂತೆ ಬ್ಯಾಂಕ್ನಿಂದ 55 ಲಕ್ಷ ವಿತ್ಡ್ರಾ ಮಾಡಿದ ಸ್ವಾಮಿ ಚೈತನ್ಯಾನಂದ
ಶುಕ್ರವಾರ ಸಂಜೆ ಹೊತ್ತಿಗೆ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕಿಯ ಮೃತದೇಹ ಪತ್ತೆಯಾಗಿದ್ದಾಗಿ ಬುಲಂದ್ಶಹರ್ ಪೊಲೀಸರಿಗೆ ಮಾಹಿತಿ ಬಂದಿತು. ಅನುಪ್ಶಹರ್ ಪೊಲೀಸ್ ಠಾಣಾ ವ್ಯಾಪ್ತಿಯ ಸೇತುವೆ ಕೆಳಗಿನ ಪೊದೆಯಲ್ಲಿ ಬಾಲಕಿ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ತನಿಖೆ ನಡೆಸಿದಾಗ ತಂದೆಯೇ ಆರೋಪಿ ಅನ್ನೋದು ಗೊತ್ತಾಗಿದೆ. ವಿಚಾರಣೆ ವೇಳೆ ಆರೋಪಿ ಕೂಡ ತಪ್ಪೊಪ್ಪಿಕೊಂಡಿದ್ದಾನೆ.
ಮೃತ ಸೋಮನ್ ಗುರುವಾರ ಎಂದಿನಂತೆ ಶಾಲೆಗೆ ಹೋಗಿದ್ದಳು. ಪ್ರತಿದಿನ ಶಾಲೆ ಮುಗಿದ ಬಳಿಕ ಆಕೆಯ ನಾನೇ ಮನೆಗೆ ಕರೆದುಕೊಂಡು ಹೋಗ್ತಿದ್ದೆ. ಆದ್ರೆ ಗುರುವಾರ ಆಕೆಯನ್ನ ಮನೆಗೆ ಕರೆದೊಯ್ಯುವ ಬದಲು ತನ್ನ ಹೊಲಕ್ಕೆ ಕರೆದುಕೊಂಡು ಹೋಗಿದ್ದೆ. ಅಲ್ಲೇ ಮಗಳಿಗೆ ಸ್ಕಾಫ್ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದೇನೆ. ಬಳಿಕ ಶವವನ್ನ ಹತ್ತಿರದ ಕಾಲುವೆಗೆ ಎಸೆದಿದ್ದೇನೆಂದು ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗಳೂರಲ್ಲಿ ಲಾಂಗ್ ಹಿಡಿದು ಅಟ್ಟಹಾಸ ಮೆರೆದಿದ್ದ ಪುಂಡರ ಗ್ಯಾಂಗ್ – ಐವರು ಅರೆಸ್ಟ್
ಪೊಲೀಸರ ಪ್ರಕಾರ, ಆರೋಪಿ ತನ್ನ ಮಗಳು ಮನೆಯಿಂದ ಹಣ ಕದಿಯುತ್ತಿದ್ದಳು. ಇದರಿಂದ ಗಂಡ – ಹೆಂಡ್ತಿ ನಡುವೆ ಪದೇ ಪದೇ ಜಗಳ ನಡೆಯುತ್ತಿತ್ತು. ಹಾಗಾಗಿ ನಾನೇ ಮಗಳನ್ನ ಕೊಂದೆ. ಕೊಂದ ಬಳಿಕ ಮಗಳು ಸಂಬಂಧಿಕರ ಮನೆಗೆ ಹೋಗಿದ್ದಾಳೆ, 3-4 ದಿನ ಅಲ್ಲೇ ಇರುತ್ತಾಳೆಂದು ಹೆಂಡತಿಗೆ ಹೇಳಿದ್ದೆ ಎಂದು ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಪಾಕ್ ಭಯೋತ್ಪಾದನೆ ವೈಭವೀಕರಿಸುತ್ತಿದೆ, ವಿಶ್ವವೇದಿಕೆಯಲ್ಲಿ ಸುಳ್ಳು ಹರಡುತ್ತಿದೆ – ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು