ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿಯಿಂದ ಹೆಂಡ್ತಿ, ಮಕ್ಕಳ ಕೊಲೆ?

Public TV
3 Min Read

ಚಿಕ್ಕಬಳ್ಳಾಪುರ: ಗಂಡ-ಹೆಂಡತಿ ಜಗಳ ಉಂಡು ಮಲಗೋ ತನಕ ಅಂತಾರೆ. ಆದರೆ ಅವರಿಬ್ಬರ ಮಧ್ಯೆ ಉಂಡು ಮಲಗಿದ ಮೇಲೂ ಜಗಳ ಮುಂದುವರಿದಿತ್ತು. ಮಧ್ಯರಾತ್ರಿ ಹೆಂಡತಿ ಹಾಗೂ ಗಂಡನ ನಡುವೆ ನಡೆದ ಜಗಳದಲ್ಲಿ ಗಂಡನೋರ್ವ ಹೆಂಡತಿ ಸೇರಿ ಇಬ್ಬರು ಮಕ್ಕಳನ್ನ ಮಚ್ಚಿನಿಂದ ಕೊಚ್ಚಿ ಕೊಂದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಯಣ್ಣೂರು ಗ್ರಾಮದಲ್ಲಿ ನಡೆದಿದೆ. ಗಂಡ-ಹೆಂಡಿರ ಜಗಳದಲ್ಲಿ ಕೂಸು ಬಡವಾಯಿತು ಅನ್ನೋ ಹಾಗೆ ಏನೂ ಅರಿಯದ ಇಬ್ಬರು ಹೆಣ್ಣುಮಕ್ಕಳು ತಾಯಿಯ ಜೊತೆಯಲ್ಲಿ ಸಾವಿನ ಮನೆ ಸೇರಿದ್ದು, ಗಂಡ ವಿಷ ಸೇವಿಸಿ ಆಸ್ಪತ್ರೆ ಸೇರಿದ್ದಾನೆ.

ಅಂದಹಾಗೆ ಗ್ರಾಮದ ಸೊಣ್ಣಪ್ಪ ಹಾಗೂ ಕೋಲಾರ ತಾಲೂಕು ನಾಚಹಳ್ಳಿಯ ನೇತ್ರಾವತಿಗೆ ವಿವಾಹವಾಗಿ 12 ವರ್ಷಗಳೇ ಕಳೆದಿದ್ದು ವರ್ಷಿತಾ ಹಾಗೂ ಸ್ನೇಹ ಇಬ್ಬರು ಹೆಣ್ಣು ಮಕ್ಕಳಿದ್ರು. ಆದರೆ ಮೊದ ಮೊದಲು ಎಲ್ಲವೂ ಚೆನ್ನಾಗಿದ್ದ ಸಂಸಾರದಲ್ಲಿ ಕಳೆದ 5-6 ವರ್ಷಗಳಿಂದ ಬಿರುಕು ಮೂಡಿದೆ. ನೇತ್ರಾವತಿ ಅದ್ಯಾರೋ ಅದೇ ಊರಿನವನೊಂದಿಗೆ ಅಕ್ರಮ ಸಂಬಂಧ (Illicit Relationship) ಹೊಂದಿದ ಆರೋಪ ಕೇಳಿಬಂದಿದ್ದು, ಈ ವಿಚಾರದಲ್ಲಿ ಗಂಡ-ಹೆಂಡತಿ ದಾಂಪತ್ಯ ಜೀವನ ಹಳಿತಪ್ಪಿದೆ. ಈ ವಿಚಾರವಾಗಿ ಹೆಂಡತಿ ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿ ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲು ಸಹ ಏರಿದ್ದಳಂತೆ.

ಇಷ್ಟೆಲ್ಲಾ ಮನಸ್ತಾಪ ಇದ್ರೂ ಗಂಡ-ಹೆಂಡತಿ ಒಂದೇ ಮನೆಯಲ್ಲಿ ವಾಸವಾಗಿದ್ರೂ ಗಂಡ-ಹೆಂಡತಿ ಸಂಬಂಧ ಅಷ್ಟಕ್ಕಷ್ಟೇ ಇತ್ತಂತೆ. ಇದೇ ವಿಚಾರದಲ್ಲಿ ಹಲವು ಬಾರಿ ಹಿರಿಕರ ಸಮ್ಮುಖದಲ್ಲಿ ಪೊಲೀಸ್ ಠಾಣೆಯಲ್ಲಿ ರಾಜೀ ಪಂಚಾಯ್ತಿಗಳನ್ನ ಸಹ ನಡೆಸಲಾಗಿತ್ತು. ಆದರೂ ಇದೇ ರೀತಿ ಕಳೆದ ರಾತ್ರಿ ಸಹ ಗಂಡ-ಹೆಂಡತಿ ನಡುವೆ ಜಗಳ ನಡೆದಿದ್ದು, ಜಗಳ ಕೊಲೆಯಲ್ಲಿ ಅಂತ್ಯವಾಗಿರಬಹುದು ಅಂತ ಅಂದಾಜಿಸಲಾಗಿದೆ.

ಕಳೆದ ರಾತ್ರಿ ನಡೆದ ಜಗಳದಲ್ಲಿ ಗಂಡ ಸೊಣ್ಣಪ್ಪ ಹೆಂಡತಿ ನೇತ್ರಾವತಿ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದು, ಮೃತ ನೇತ್ರಾವತಿ ತಲೆ ಕುತ್ತಿಗೆ ಭಾಗದಲ್ಲಿ ಗಾಯದ ಗುರುತುಗಳಿವೆ. ಹಿರಿಯ ಮಗಳು ವರ್ಷಿತಾ ತಲೆಗೆ ಗಂಭೀರ ಗಾಯವಾಗಿದ್ದು, ಆಕೆಗೂ ಮಚ್ಚಿನಿಂದ ಹಲ್ಲೆ ಮಾಡಿರುವ ಸಾಧ್ಯತೆ ಇದೆ. ಪಾಪ ಕಿರಿಯ ಮಗಳು ವರ್ಷಿತಾ ಮೈಮೇಲೆ ಯಾವುದೇ ಗಾಯದ ಗುರುತುಗಳಿಲ್ಲವಾದರೂ ಆಕೆಯನ್ನ ಕತ್ತು ಹಿಸುಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ದೆಹಲಿ ಪಾಲಿಕೆ ಚುಕ್ಕಾಣಿ ಹಿಡಿದ ಆಮ್ ಆದ್ಮಿ – ಶೆಲ್ಲಿ ಒಬೆರಾಯ್ ಮೇಯರ್ ಆಗಿ ಆಯ್ಕೆ

ಮೇಲ್ನೋಟಕ್ಕೆ ಮೂವರನ್ನ ಕೊಲೆ ಮಾಡಿ ತದನಂತರ ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿರುವ ಬಲವಾದ ಶಂಕೆ ವ್ಯಕ್ತವಾಗಿದೆ. ಘಟನೆ ನಂತರ ಸೊಣ್ಣಪ್ಪ ಸಹ ತಾನು ಸಹ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಳಗ್ಗೆ ಮನೆಯಿಂದ ಹೊಗೆ ಬರೋದನ್ನ ನೋಡಿದ ಅಕ್ಕಪಕ್ಕದ ಮನೆಯವರು ಮನೆ ಬಳಿ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮಧ್ಯರಾತ್ರಿಯಲ್ಲಿ ಘಟನೆ ನಡೆದಿದ್ದು, ನಾಲ್ವರು ಸಹ ಮನೆಯ ಮುಂಭಾಗ ಒಬ್ಬರ ಪಕ್ಕ ಒಬ್ಬರು ಮಲಗಿದ ಹಾಗೆ ಕಂಡು ಬಂದಿದ್ದಾರೆ. ಕೂಡಲೇ ಉಸಿರಾಡುತ್ತಿದ್ದ ಸೊಣ್ಣಪ್ಪ ನನ್ನ ಶಿಡ್ಲಘಟ್ಟ ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಸೊಣ್ಣಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಇನ್ನೂ ಶಿಡ್ಲಘಟ್ಟ ಗ್ರಾಮಾಂತರ ಮೃತಳ ಸಂಬಂಧಿಕರ ಬಳಿ ಪ್ರಕರಣ ಪಡೆದುಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದಾರೆ. ಆದರೆ ಹೆಂಡತಿಯ ಅಕ್ರಮ ಸಂಬಂಧದಿಂದ ಬೇಸತ್ತ ಗಂಡ ಮಾಡಬಾರದ ಕೆಲಸ ಮಾಡಿಯಾಗಿದೆ. ಗಂಡ -ಹೆಂಡತಿ ಜಗಳದಲ್ಲಿ ಪಾಪ ಏನೂ ಅರಿಯದ ಅಮಾಯಕ ಇಬ್ಬರು ಹೆಣ್ಣು ಮಕ್ಕಳು ಬಲಿಯಾಗಿಬಿಟ್ರಲ್ಲಾ ಅನ್ನೋದೇ ನೋವಿನ ಸಂಗತಿ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
1 Comment

Leave a Reply

Your email address will not be published. Required fields are marked *