ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸರ್ಕಾರ ರಚನೆ ಆದಾಗಿನಿಂದಲೂ ಸ್ಥಳೀಯ ಮಟ್ಟದ ಕಾರ್ಯಕರ್ತರು ಮಾತ್ರ ಒಂದಾಗುತ್ತಿಲ್ಲ. ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮೂಗೂರು ಗ್ರಾಮದಲ್ಲಿ ಜೆಡಿಎಸ್-ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಗೆ ಅಮಾಯಕರು ಏಟು ತಿಂದು ಆಸ್ಪತ್ರೆ ಸೇರಿದ್ದಾರೆ.
ಮೂಗೂರು ಗ್ರಾಮದಲ್ಲಿ ಒಂದು ಸಮಾಜದ ಸಮುದಾಯದ ಭವನ ನಿರ್ಮಾಣಕ್ಕೆ ಕಾಂಗ್ರೆಸ್ ಸಂಸದ ಆರ್. ಧೃವನಾರಾಯಣ್ ಗುದ್ದಲಿ ಪೂಜೆ ಮಾಡಿದ್ದಾರೆ. ಈ ಕಾರ್ಯಕ್ರಮಕ್ಕೆ ಸ್ಥಳೀಯ ಜೆಡಿಎಸ್ ಶಾಸಕ ಅಶ್ವಿನ್ ಕುಮಾರ್ ಅವರನ್ನು ಆಹ್ವಾನಿಸಿಲ್ಲ ಎಂದು ಆ ಸಮಾಜದ ಸ್ಥಳೀಯ ಮುಖಂಡರ ಮೇಲೆ ಜೆಡಿಎಸ್ ಕಾರ್ಯಕರ್ತ ಮೂಗೂರು ಶಿವಮೂರ್ತಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹಲ್ಲೆಗೊಳಗಾದ ಮಹದೇವಸ್ವಾಮಿ (24), ನಾಗರಾಜು (35), ಚಿಕ್ಕಣ್ಣ (40) ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮುದಾಯದ ಮುಖಂಡರ ಮೇಲಿನ ಹಲ್ಲೆ ಖಂಡಿಸಿ ಗ್ರಾಮಸ್ಥರು ಟಿ.ನರಸೀಪುರ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv