ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಚಿತ್ರೋದ್ಯಮದ ಗಣ್ಯರು

Public TV
1 Min Read

ನಿರ್ಮಾಪಕರ ಸಂಘದ ಪದಾಧಿಕಾರಿಗಳು ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾದಂತಹ ಸಾ. ರಾ.ಗೋವಿಂದು (Sa. Ra. Govind) ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ಭೇಟಿಯಾಗಿ ಚಿತ್ರರಂಗಕ್ಕೆ ಸಂಬಂಧಪಟ್ಟಂತಹ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಯಿತು. ಬಾಕಿ ಉಳಿದುಕೊಂಡಿರುವ ಸಬ್ಸಿಡಿ ಹಣ, ರಾಜ್ಯ ಪ್ರಶಸ್ತಿ. ಮುಚ್ಚುತ್ತಿರುವ ಚಿತ್ರಮಂದಿರಗಳ ಪರಿಸ್ಥಿತಿ. ಮೈಸೂರಿನಲ್ಲಿ ಚಿತ್ರನಗರಿ. ಪೈರಸಿ ಇಂದ ಉದ್ಯಮಕ್ಕೆ ಆಗುತ್ತಿರುವ ನಷ್ಟ. ತೆರಿಗೆ ಇಂದ ಆಗುತ್ತಿರುವ ಸಮಸ್ಯೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ಸುದೀರ್ಘವಾದಂತಹ ಚರ್ಚೆಯನ್ನ ಮಾಡಿದ್ದಾರೆ.

ನಿಯೋಗ ಮಾಡಿದ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು ಸಮಗ್ರ ಸಮಸ್ಯೆಗಳ ಚರ್ಚೆಗೆ  ಸಮಯವನ್ನು ನಿಗದಿಪಡಿಸಿ ಪರಿಹಾರಕ್ಕೆ ಅಧಿಕಾರಿಗಳೊಂದಿಗೆ  ಅತಿ ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸುತ್ತೇನೆಂದು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಜನವರಿಯಲ್ಲಿ ಅರ್ಜುನ್ ಸರ್ಜಾ ಮಗಳ ಮದುವೆ: ಮಾವನ ಮನೆಯಿಂದ ಅಧಿಕೃತ ಘೋಷಣೆ

 

ಈ ಸಂದರ್ಭದಲ್ಲಿ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ (Umesh Bankara) ಕಾರ್ಯದರ್ಶಿ ಪ್ರವೀಣ್ ಕುಮಾರ್ (ಡಿ.ಕೆ. ರಾಮಕೃಷ್ಣ ) ಹಾಗೂ ಉಪಾಧ್ಯಕ್ಷರಾ ಎಂ.ಜಿ. ರಾಮಮೂರ್ತಿ ನಿರ್ಮಾಪಕ ಎನ್.ಎಂ ಸುರೇಶ್ ಸೇರಿದಂತೆ ಹಲವರು ನಿಯೋಗದಲ್ಲಿದ್ದರು.

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ