ಬಹುಮತ ಸಾಬೀತಿಗೆ ಬಿಜೆಪಿಯಿಂದ ಕೊನೆ ಕ್ಷಣದ ಕಸರತ್ತು!

Public TV
1 Min Read

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ವಿಧಾನ ಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿರುವ ಹಿನ್ನೆಲೆಯಲ್ಲಿ ಬಹುಮತ ಸಾಬೀತಿಗೆ ಬಿಜೆಪಿ ಕೊನೆ ಕ್ಷಣದ ಕಸರತ್ತು ಮಾಡುತ್ತಿದೆ.

ಶಾಂಗ್ರಿಲಾ ಹೋಟೆಲ್‍ ನಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಶಾಸಕಾಂಗ ಪಕ್ಷದ ನಾಯಕ ಬಿಎಸ್‍ವೈ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಡಿವಿ ಸದಾನಂದ ಗೌಡ, ಪ್ರಕಾಶ್ ಜಾವ್ಡೇಕರ್, ಜೆಪಿ ನಡ್ಡಾ, ಧಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಸಭೆಯ ಬಳಿಕ ಶಾಸಕರು ವಿಶ್ರಾಂತಿ ಪಡೆದು ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಬಿಜೆಪಿ ನಾಯಕರು ಬಹುಮತ ಸಾಬೀತುಪಡಿಸುವ ಹುಮ್ಮಸ್ಸಿನಲ್ಲಿದ್ದಾರೆ. ಆದರೆ ಯಾರು ಯಾವ ರೀತಿಯ ಕಾರ್ಯತಂತ್ರ ರೂಪಿಸಿದ್ದೇವೆ ಎನ್ನುವ ಬಗ್ಗೆ ಗುಟ್ಟು ಬಿಟ್ಟುಕೊಡದ ಹಿನ್ನೆಲೆಯಲ್ಲಿ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಯಡಿಯೂರಪ್ಪ ವಿಶ್ವಾಸಮತ ಯಾಚನೆ ಮಾಡಲಿದ್ದು, ಮೊದಲಿಗೆ ಚುನಾಯಿತ ಜನಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕಾರ ಮಾಡುತ್ತಾರೆ. ಬಳಿಕ ಸಿಎಂ ಯಡಿಯೂರಪ್ಪ ಪ್ರಸ್ತಾವ ಮಂಡಿಸಿ ಸರ್ಕಾರವನ್ನು ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *