ತುಮಕೂರಿನಿಂದಲೇ ಎಚ್.ಡಿ ದೇವೇಗೌಡ್ರು ಸ್ಪರ್ಧೆ

Public TV
1 Min Read

ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರು ತಮ್ಮ ಕ್ಷೇತ್ರವನ್ನು ಮೊಮ್ಮಗನಿಗೆ ಬಿಟ್ಟುಕೊಟ್ಟ ಬಳಿಕ ಎಲ್ಲಿಂದ ಲೋಕ ಅಖಾಡಕ್ಕೆ ಇಳಿಯುತ್ತಾರೆ ಎಂಬ ಭಾರೀ ಕುತೂಹಲಕ್ಕೆ ಇದೀಗ ತೆರೆ ಬಿದ್ದಿದೆ. ಯಾಕಂದ್ರೆ ಎಚ್‍ಡಿಡಿ ಅವರು ಕೊನೆಗೂ ತುಮಕೂರಿನಿಂದಲೇ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಅಳೆದೂ ತೂಗಿ ತೀರ್ಮಾನಕ್ಕೆ ಬಂದಿರೋ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಶುಕ್ರವಾರ ರಾತ್ರಿ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಪಕ್ಷದ ಮುಖಂಡರೊಂದಿಗೆ ಸುದೀರ್ಘ ಸಭೆ ನಡೆಸಿದ ದೇವೇಗೌಡರು ಅಂತಿಮವಾಗಿ ತುಮಕೂರಿನಿಂದ ಅಖಾಡಕ್ಕಿಳಿಯುವ ಫರ್ಮಾನು ಹೊರಡಿಸಿದ್ದಾರೆ.

ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ತುಮಕೂರು ಜಿಲ್ಲೆಯ ಜೆಡಿಎಸ್ ಶಾಸಕರಾದ ಸಚಿವ ಗುಬ್ಬಿ ವಾಸು, ಬಿ.ಸತ್ಯನಾರಾಯಣ, ಬಿ.ಸಿ.ಗೌರಿಶಂಕರ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಇತ್ತ ಮೂರು ಬಾರಿ ಮುಂದೂಡಿಕೆಯಾಗಿದ್ದ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನವದೆಹಲಿಯ ಸೋನಿಯಾ ಗಾಂಧಿ ನಿವಾಸದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಶುಕ್ರವಾರ ನಡೆಯಿತು. ರಾಜ್ಯದಿಂದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಿಎಂ ಸಿದ್ದರಾಮಯ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ರಾಜ್ಯದ ಇಪ್ಪತ್ತು ಕ್ಷೇತ್ರಗಳಿಗೆ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆಸಲಾಯಿತು.

ಫೈನಲ್ ಆಗಿರುವ ಕಾಂಗ್ರೆಸ್ ಅಭ್ಯರ್ಥಿಗಳು
ಬಾಗಲಕೋಟೆ- ವೀಣಾ ಕಾಶಪ್ಪನವರ್
ಬೀದರ್- ಈಶ್ವರ್ ಖಂಡ್ರೆ
ಹಾವೇರಿ – ಡಿಆರ್ ಪಾಟೀಲ್

ಬೆಂಗಳೂರು ಗ್ರಾಮಾಂತರ- ಡಿ.ಕೆ.ಸುರೇಶ್
ಕಲ್ಬುರ್ಗಿ- ಮಲ್ಲಿಕಾರ್ಜುನ್ ಖರ್ಗೆ
ಕೋಲಾರ – ಕೆ.ಹೆಚ್.ಮುನಿಯಪ್ಪ
ಚಿಕ್ಕಬಳ್ಳಾಪುರ – ವೀರಪ್ಪ ಮೊಯ್ಲಿ

ಚಾಮರಾಜನಗರ – ಧ್ರುವನಾರಾಯಣ್
ಚಿತ್ರದುರ್ಗ – ಬಿ.ಎನ್.ಚಂದ್ರಪ್ಪ
ರಾಯಚೂರು- ಬಿ.ವಿ.ನಾಯಕ್
ಬಳ್ಳಾರಿ – ಉಗ್ರಪ್ಪ
ಚಿಕ್ಕೋಡಿ – ಪ್ರಕಾಶ್ ಹುಕ್ಕೇರಿ

ಕಾಂಗ್ರೆಸ್ ಸಂಭಾವ್ಯ ಪಟ್ಟಿ
ದಕ್ಷಿಣ ಕನ್ನಡ – ವಿನಯ್ ಕುಮಾರ್ ಸೊರಕೆ
ಹುಬ್ಬಳ್ಳಿ, ಧಾರವಾಡ – ಶಾಕಿರ್ ಸನದಿ / ಸದಾನಂದ ಡಂಗನವರ್
ಬೆಂಗಳೂರು ಸೆಂಟ್ರಲ್ – ರಿಜ್ವಾನ್ ಅರ್ಷದ್
ಮೈಸೂರು – ವಿಜಯಶಂಕರ್
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ದಾವಣಗೆರೆ – ಎಸ್ ಎಸ್ ಮಲ್ಲಿಕಾರ್ಜುನ್
ಬೆಂಗಳೂರು ದಕ್ಷಿಣ – ಪ್ರಿಯಾಕೃಷ್ಣಾ

Share This Article
Leave a Comment

Leave a Reply

Your email address will not be published. Required fields are marked *