ನಾಯಿ ಮೇಲೆ ಹಲ್ಲೆ ನಡೆಸಿದ್ದಕ್ಕೆ ಯುವಕರ ವಿರುದ್ಧ ಎಫ್‍ಐಆರ್ ದಾಖಲು

Public TV
1 Min Read

ಮೈಸೂರು: ಸಾಕಿದ ನಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಯುವಕರ ಮೇಲೆ ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರಿನ ಲೋಕನಾಯಕ ನಗರದಲ್ಲಿ ನಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಕ್ಕೆ ಸಂತೋಷ್ ಹಾಗೂ ಗೌತಮ್ ವಿರುದ್ಧ ಪ್ರಕರಣ ದಾಖಲಾಗಿದೆ.

ನಿವೃತ್ತ ಪಿಡಿಓ ನಂಜಪ್ಪ ಎಂಬವರು ಕೆಂಚ ಹೆಸರಿನ ನಾಯಿ ಸಾಕಿದ್ದರು. ನಂಜಪ್ಪ ಅವರು ಸಾಕಿದ ಕೆಂಚ ನಾಯಿ ಸ್ಥಳೀಯರಿಗೆ ಕೆಲ ಬಾರಿ ಕಚ್ಚಿದೆ. ಇದರಿಂದ ಕೋಪಗೊಂಡ ಸಂತೋಷ್ ಮತ್ತು ಗೌತಮ್ ರಾತ್ರಿ ವೇಳೆ ಆಗಮಿಸಿ ಕೋಲಿನಿಂದ ನಾಯಿಗೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಸಂತೋಷ್ ಹಾಗೂ ಗೌತಮ್ ನಾಯಿ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಸದ್ಯ ನಾಯಿಗೆ ಬೋಗಾದಿಯಲ್ಲಿರುವ ಪಿಎಫ್‍ಓ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *