ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಕಾರು ಚಾಲಕ ಆತ್ಮಹತ್ಯೆ ಪ್ರಕರಣದಲ್ಲಿ ಸಂಸದ ಡಾ.ಕೆ.ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಡಾ.ಕೆ.ಸುಧಾಕರ್ ಹಾಗೂ ಅವರ ಬೆಂಬಲಿಗರ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೆ.ಸುಧಾಕರ್ ಹಾಗೂ ಇಬ್ಬರು ಆರೋಪಿಗಳ ಮೇಲೆ ಎಫ್ಐಆರ್ ದಾಖಲಾಗಿದೆ.
ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. A1 ಸಂಸದ ಡಾ.ಕೆ.ಸುಧಾಕರ್, a2 ನಾಗೇಶ, a3 ಮಂಜುನಾಥ್. ಬಿಎನ್ಎಸ್ 2023 ( u/s 108, 352. 351(2), (3)(5) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಎಫ್ಐಆರ್ ಆಗಿದೆ.