ಹೊತ್ತಿ ಉರಿದ ಕೆಮಿಕಲ್ ಕಾರ್ಖಾನೆ- ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

Public TV
0 Min Read

ಬೆಂಗಳೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಕೆಮಿಕಲ್ ಕಾರ್ಖಾನೆ ಹೊತ್ತಿ ಉರಿದ ಘಟನೆ ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಕ್ಷಣ ಕ್ಷಣಕ್ಕೂ ಬೆಂಕಿ ಹೆಚ್ಚಾಗಿ ಸಿಲಿಂಡರ್ ಸ್ಫೋಟಗೊಂಡಿವೆ. ಬೆಂಕಿ ನಂದಿಸಲು ಪೀಣ್ಯ, ಯಶವಂತಪುರ, ತುಮಕೂರುನಿಂದ ಅಗ್ನಿಶಾಮಕ ವಾಹನಗಳು ಬಂದಿದ್ವು. ಲಿಯೋನಿಡ್ ಕೆಮಿಕಲ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಕೆಮಿಕಲ್ ಹಾಗೂ ಇನ್ನಿತರೆ ವಸ್ತುಗಳು ಸುಟ್ಟು ಭಸ್ಮವಾಗಿದೆ.

ಶಿವರಾತ್ರಿ ಹಬ್ಬವಾದುದರಿಂದ ಕಾರ್ಖಾನೆಗೆ ರಜೆ ಘೋಷಿಸಲಾಗಿತ್ತು. ಹೀಗಾಗಿ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದಾಗಿ ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *