ಕೊಪ್ಪಳದಲ್ಲಿ ಧಗಧಗನೆ ಹೊತ್ತಿ ಉರಿದ ಜ್ಯುವೆಲ್ಲರಿ ಶಾಪ್‌ – ಚಿನ್ನಾಭರಣ ಬೆಂಕಿಗಾಹುತಿ

By
1 Min Read

ಕೊಪ್ಪಳ: ಇಲ್ಲಿನ ಗಂಗಾವತಿ ನಗರದ (Gangavathi City) ಗಣೇಶ ವೃತ್ತದಲ್ಲಿ ಕೆಜೆಪಿ ಜ್ಯುವೆಲ್ಲರಿ ಮಳಿಗೆಯಲ್ಲಿ (Jewellery Shops) ಅಗ್ನಿ ಅವಘಡ (Fire Accident) ಸಂಭವಿಸಿದ್ದು, ಮೂರು ಅಂತಸ್ತಿನ ಕಟ್ಟಡ ಬೆಂಕಿಗೆ ಆಹುತಿ ಆಗಿದೆ.‌

- Advertisement -

ವಿದ್ಯುತ್ ಶಾರ್ಟ್ ಸರ್ಕ್ಯೂಟ್ (Short Circuit) ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ತಡರಾತ್ರಿ ಘಟನೆ ನಡೆದಿದೆ. ಕೆಲ ಹೊತ್ತಿನಲ್ಲೇ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಜನನಿಬಿಡ ಪ್ರದೇಶದಲ್ಲಿ ಅವಘಡ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.‌ ಸ್ಥಳಕ್ಕೆ 4 ಅಗ್ನಿಶಾಮಕ ವಾಹನ ದೌಡಾಯಿಸಿ, ಬೆಂಕಿ ನಂದಿಸಲು ಹರಸಾಹಸ ನಡೆಸಿವೆ.

- Advertisement -

- Advertisement -

ಒಟ್ಟು 3 ಮಹಡಿಯ ಕೆಜೆಪಿ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಚಿನ್ನಾಭರಣ ಮತ್ತು ಬಟ್ಟೆ ಅಂಗಡಿಗಳಿವೆ ಇವೆ. ಎಲ್ಲ ಕಡೆ ಬೆಂಕಿ ಹೊತ್ತಿಕೊಂಡಿದೆ. ಸತತ 6 ಗಂಟೆ ಕಾರ್ಯಾಚರಣೆ ನಂತರ ಬೆಂಕಿ ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅಪಾರ ಪ್ರಮಾಣದ ಚಿನ್ನಾಭರಣ ಬೆಂಕಿಗೆ ಆಹುತಿ ಆಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲೆ ನಿರ್ಮಾಣವಾದ್ರೆ ಕಿರಿಕಿರಿ ಎಂದು ಕಾಮಗಾರಿಗೆ ಅಡ್ಡಿ – ಸಿಎ ಸೈಟಲ್ಲಿ ದೇವಾಲಯ ನಿರ್ಮಾಣ

- Advertisement -

ಗಂಗಾವತಿ ನಗರ ಠಾಣೆಯಲ್ಲಿ (Gangavathi City Police) ಪ್ರಕರಣ ದಾಖಲಾಗಿದೆ‌. ಇದನ್ನೂ ಓದಿ: ಇನ್ಮುಂದೆ ರಾಜ್ಯದ ಪರ್ಮಿಟ್ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ಕಡ್ಡಾಯ 

Share This Article