ದನದ ಕೊಟ್ಟಿಗೆಯಲ್ಲಿ ಬೆಂಕಿ- ಜಾನುವಾರುಗಳು ಸಜೀವ ದಹನ

Public TV
0 Min Read

ಬೆಳಗಾವಿ: ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಜಾನುವಾರುಗಳು ಸಜೀವ ದಹನವಾದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ನಡೆದಿದೆ.

ಎಮ್ಮೆ, ಆಕಳು, ಆಡು ಸೇರಿದಂತೆ ಸುಮಾರು 5 ಜಾನುವಾರುಗಳು ಬೆಂಕಿಗೆ ಆಹುತಿಯಾಗಿವೆ. ದತ್ತಾ ಸೂರ್ಯವಂಶಿ ಎಂಬವರಿಗೆ ಸೇರಿದ ಜಾನುವಾರುಗಳು ಇವಾಗಿವೆ. ಸೋಮವಾರ ರಾತ್ರಿ ಸಮಯದಲ್ಲಿ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿತ್ತು. ತೋಟದಲ್ಲಿ ಪ್ರದೇಶದಲ್ಲಿ ದನದ ಕೊಟ್ಟಿಗೆ ಇರುವುದರಿಂದ ಘಟನೆ ಯಾರಿಗೂ ತಿಳುದುಬಂದಿಲ್ಲ. ಹೀಗಾಗಿ ಮೂಕಪ್ರಾಣಿಗಳು ಸಾವನ್ನಪ್ಪಿವೆ.

ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *