ಹುಬ್ಬಳ್ಳಿ ತಾರಿಹಾಳ ಅಗ್ನಿ ಅವಘಡ- ಸಂತ್ರಸ್ತರಿಗೆ ಪರಿಹಾರ ಕೊಡಿಸುವ ಜೋಶಿ ಕಾಳಜಿಗೆ ಸಿಎಂ ಸ್ಪಂದನೆ

Public TV
2 Min Read

ಹುಬ್ಬಳ್ಳಿ: ತಾರಿಹಾಳ ಕೈಗಾರಿಕಾ ವಲಯದ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದ ಸಂತ್ರಸ್ತರಿಗೆ ಕೂಡಲೇ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಾಳಜಿ ವಹಿಸಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದರು. ಈ ವೇಳೆ ಅಗ್ನಿ ಅವಘಡದ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಕೇಂದ್ರ ಸಚಿವರು, ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಗೊಂಡವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಮೂಲಕ ನೆರವು ನೀಡುವ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಸಂತ್ರಸ್ತರ ಪರ ಜೋಶಿ ಅವರ ಕಾಳಜಿಗೆ ಸ್ಪಂದಿಸಿರುವ ಸಿಎಂ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮೂಲಕ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ರಾಜಕಾರಣದಲ್ಲಿ ಯಶಸ್ವಿಯಾಗಬೇಕಾದರೆ, ಕಬಡ್ಡಿನೂ ಗೊತ್ತಿರಬೇಕು, ಚದುರಂಗದಾಟನೂ ಗೊತ್ತಿರಬೇಕು: ಬಿ.ವೈ.ವಿಜಯೇಂದ್ರ

ಈ ಬಗ್ಗೆ ಟ್ವಿಟ್ಟರ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಈ ದುರ್ಘಟನೆಯ ಬಗ್ಗೆ ತಿಳಿದು ಅಘಾತವಾಯಿತು. ಬೆಂಕಿ ಅವಘಡಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವಘಡದಲ್ಲಿ ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬದವರಿಗೆ ಹಾಗೂ ಗಾಯಾಳುಗಳಿಗೆ ಪರಿಹಾರ ನೀಡುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮಾತಾಡಿದ್ದೇನೆ. ಸಿಎಂ ಕೂಡಲೇ ಈ ಬಗ್ಗೆ ಕ್ರಮವಹಿಸೋದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಸ್ಪಂದನೆಗೆ ಧನ್ಯವಾದ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಹೋಟೆಲ್ ಬಳಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಉಗ್ರರಿಗೆ ಸಿಲಿಕಾನ್ ಸಿಟಿ ಸ್ಲೀಪರ್ ಸೇಲ್?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *