ಆರ್‍ಆರ್‍ ನಗರದಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಭಸ್ಮ

Public TV
0 Min Read

ಬೆಂಗಳೂರು: ಇಲ್ಲಿನ ರಾಜರಾಜೇಶ್ವರಿ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕೆಂಚನಹಳ್ಳಿಯಲ್ಲಿರುವ ಹಳೇ ಪ್ಲಾಸ್ಟಿಕ್‍ ನ ಸಂಸ್ಕರಣ ಘಟಕದಲ್ಲಿ ಭಾನುವಾರ ರಾತ್ರಿ 12 ಗಂಟೆಗೆ ದಿಢೀರ್ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಹಳೇ ಪ್ಲಾಸ್ಟಿಕ್ ಸುಟ್ಟು ಭಸ್ಮವಾಗಿದೆ.

ಇದು ದೇವು ಎಂಬುವವರಿಗೆ ಸೇರಿದ ಗೋದಾಮು ಆಗಿದ್ದು, ಸ್ಥಳಕ್ಕೆ 8 ಆಗ್ನಿಶಾಮಕ ವಾಹನಗಳು ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು. ಕುಡಿತದ ಅಮಲಿನಲ್ಲಿ ಯಾರೋ ಗೋದಾಮಿಗೆ ಬೆಂಕಿ ಹಚ್ಚಿದ್ದಾರೆಂದು ಎಂದು ಶಂಕಿಸಲಾಗಿದೆ. ಬೆಂಕಿ ಅನಾಹುತದಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಈ ಸಂಬಂಧ ಕೆಂಗೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *