ಹೊಸಪೇಟೆ | ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಭಾರೀ ಬೆಂಕಿ

Public TV
1 Min Read

ಬಳ್ಳಾರಿ: ಬಿಸಿಲಿನ ಝಳಕ್ಕೆ ಕಾದು ಕೆಂಡವಾಗಿದ್ದ ತುಂಗಭದ್ರಾ ಡ್ಯಾಂ (Tungabhadra Dam) ಬಳಿಯ ಗುಡ್ಡದಲ್ಲಿ ಬುಧವಾರ ಸಂಜೆ ಬೆಂಕಿ (Fire) ಕಾಣಿಸಿಕೊಂಡಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಹೆ 50ರ ಪಕ್ಕದಲ್ಲಿರೋ ಟಿಬಿ ಡ್ಯಾಂ ಬಳಿಯ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕೆನ್ನಾಲಿಗೆಗೆ ಗುಡ್ಡ ಧಗಧಗನೆ ಹೊತ್ತಿ ಉರಿದಿದೆ. ಇದನ್ನೂ ಓದಿ: ಹಾವೇರಿಯಿಂದ ಶಬರಿಮಲೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ – ಗುರುಸ್ವಾಮಿ ಸಾವು, 10ಕ್ಕೂ ಅಧಿಕ ಮಂದಿಗೆ ಗಾಯ

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಈ ಕುರಿತು ಪರಿಶೀಲಿಸಿರುವ ಅರಣ್ಯಾಧಿಕಾರಿಗಳು ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರಬಹುದು ಅಥವಾ ಬಿಡಿ, ಸಿಗರೇಟ್ ಕಿಡಿ ಬಿದ್ದಿರಬಹುದೆಂದು ಶಂಕಿಸಿದ್ದಾರೆ. ಇದನ್ನೂ ಓದಿ: Amur Falcon | ಸೈಬೀರಿಯಾ To ಆಫ್ರಿಕಾ 22 ಸಾವಿರ ಕಿ.ಮೀ ಪ್ರಯಾಣ – ವಿಶೇಷ ಆಹಾರಕ್ಕೆ ಭಾರತದಲ್ಲಿ ನಿಲುಗಡೆ!

Share This Article