ಮಾರ್ಬಲ್ ಅಂಗಡಿಯಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Public TV
0 Min Read

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾರ್ಬಲ್ ಅಂಗಡಿಯಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ.

ಮಾರ್ಬಲ್ ಅಂಗಡಿ ರಾಜಸ್ಥಾನ ಮೂಲದ ಪುರುಷೋತ್ತಮ್ ಎಂಬವರಿಗೆ ಸೇರಿದ ಮಳಿಗೆಯಾಗಿದ್ದು, ಆಕಸ್ಮಿಕವಾಗಿ ಸಂಭವಿಸಿದ ಈ ಅಗ್ನಿ ಅವಘಡದಿಂದಾಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ 3 ಅಗ್ನಿಶಾಮಕ ವಾಹನಗಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಕುಶಾಲನಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *