ಶ್ರೀನಗರ ಆಸ್ಪತ್ರೆಯಲ್ಲೇ ಪೊಲೀಸರ ಮೇಲೆ ದಾಳಿ ನಡೆಸಿ ಚೆಕಪ್‍ಗೆ ಬಂದಿದ್ದ ಉಗ್ರ ಪರಾರಿ

Public TV
1 Min Read

ಶ್ರೀನಗರ: ನಗರದ ಶ್ರೀ ಮಹಾರಾಜ ಹರಿಸಿಂಗ್ ಆಸ್ಪತ್ರೆಯಲ್ಲಿ ಉಗ್ರನೊಬ್ಬ ಪೋಲಿಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾನೆ.

ಭಯೋತ್ಪಾದಕ ನವೀದ್ ನನ್ನು ವೈದ್ಯಕೀಯ ಚಿಕಿತ್ಸೆಗೆ ಆಸ್ಪತ್ರೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಆತ ಪೇದೆಯ ರೈಫಲ್ ಕಸಿದುಕೊಂಡು ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ.

ದಾಳಿಯಲ್ಲಿ ಒಬ್ಬ ಪೊಲೀಸ್ ಪೇದೆ ಸಾವನ್ನಪ್ಪಿದ್ದು, ಮತ್ತೊಬ್ಬ ಪೇದೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ ಪೇದೆಯನ್ನು ಮುಷ್ತಾಕ್ ಎಂದು ಗುರುತಿಸಲಾಗಿದೆ. ದಾಳಿಯ ನಡೆದ ತಕ್ಷಣ ಪೊಲೀಸರು ಇಡೀ ಪ್ರದೇಶವನ್ನು ವಶಕ್ಕೆ ಪಡೆದಿದ್ದು, ಮತ್ತಷ್ಟು ಉಗ್ರರು ಇರಬಹುದು ಎನ್ನುವ ಶಂಕೆಯ ಆಧಾರದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದಾರೆ.

ದಾಳಿ ನಡೆದ ವೇಳೆ ಉಗ್ರರ ನವೀದ್ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ. ಅಬು ಹಂಜುಲ್ಲಾ ಅಲಿಯಾಸ್ ನವೀದ್ ಜಾಟ್ ನನ್ನು ಕಳೆದ ಕೆಲ ತಿಂಗಳ ಹಿಂದೆ ಶೋಪಿಯಾನ್ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿತ್ತು.

 

Share This Article
Leave a Comment

Leave a Reply

Your email address will not be published. Required fields are marked *