ಬೆಂಗಳೂರಿನಲ್ಲಿ ಹಾಡಹಗಲೇ ಎಪಿಎಂಸಿ ಅಧ್ಯಕ್ಷನ ಮೇಲೆ ಗುಂಡಿನ ದಾಳಿ

Public TV
1 Min Read

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಹಾಡಹಗಲೇ ಶೂಟೌಟ್ ನಡೆದಿದೆ. ಕೋಗಿಲು ಸಿಗ್ನಲ್ ಬಳಿ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಾರಿನಲ್ಲಿದ್ದ ವ್ಯಕ್ತಿಗಳ ಮೇಲೆ ಶೂಟೌಟ್ ಮಾಡಿದ್ದಾರೆ.

ದಾಸನಪುರ ಎಪಿಎಂಸಿ ಅಧ್ಯಕ್ಷ ಕಡಬಗೆರೆ ಶ್ರೀನಿವಾಸ್ ಅವರಿದ್ದ ಕಾರಿನ ಮೇಲೆ ಗುಂಡಿನ ದಾಳಿ ನಡೆದಿದ್ದು, ಶ್ರೀನಿವಾಸ್ ಮತ್ತು ಡ್ರೈವರ್ ಅವರನ್ನು ಈಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಲಹಂಕ ನ್ಯೂಟೌನ್ ಕಡೆಯಿಂದ ನಂಬರ್ ಪ್ಲೇಟ್ ಇಲ್ಲದ ಪಲ್ಸರ್ ಬೈಕಿನಲ್ಲಿ ಆಗಮಿಸಿದ ಇಬ್ಬರು ಶುಕ್ರವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಕೆಎ 04 ಎಂಎಸ್ 605 ನ ಹೋಂಡಾ ಸಿಟಿ ಕಾರ್ ಮೇಲೆ ಆರು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಬ್ಲಾಕ್ ಪಲ್ಸರ್ ನಲ್ಲಿ ಮುಖಕ್ಕೆ ಪ್ಲಾಸ್ಟಿಕ್ ಮಾಸ್ಕ್ ಹಾಕಿಕೊಂಡು ಬಂದಿದ್ದರು. ಫೈರಿಂಗ್ ಆದ ಬಳಿಕ ಬೈಕನ್ನು ಬಿಟ್ಟು ಸಿಗ್ನಲ್ ದಾಟಿ ಮಾಸ್ಕ್ ತೆಗೆದು ಹೋಗಿದ್ದಾರೆ.

ರೌಡಿಶೀಟರ್ ಪಾಯಿಸನ್ ರಾಮನ ಸಹೋದರನಾಗಿರುವ ಕಡಬಗೆರೆ ಶ್ರೀನಿವಾಸ್ ಈ ಹಿಂದೆ ಬಿಜೆಪಿಯಿಂದ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರೆ, ಎರಡನೇ ಬಾರಿಗೆ ಕಾಂಗ್ರೆಸ್‍ನಿಂದ ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *