ನಿಖಿಲ್ ಪಟ್ಟಾಭಿಷೇಕಕ್ಕೂ ಮುನ್ನ ರಾಜ್ಯ ಪ್ರವಾಸದ ಪರೀಕ್ಷೆ – ನಾಳೆಯಿಂದ ಮೊದಲ ಹಂತದ ಟೂರ್

Public TV
2 Min Read

– ಹಳೇ ಮೈಸೂರಿನ‌ 80 ಕ್ಷೇತ್ರಗಳ ಮೇಲೆ ಫೋಕಸ್

ಬೆಂಗಳೂರು: ಜೆಡಿಎಸ್‌ನಲ್ಲಿ (JDS) ಯುವ ನಾಯಕ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪಟ್ಟಾಭಿಷೇಕಕ್ಕೆ ಪೂರ್ವ ತಯಾರಿ ಜೋರಾಗಿ ಶುರುವಾಗಿದೆ. ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ದಳಪತಿಗಳು ಮುಂದಾಗಿದ್ದಾರೆ. ನಾಳೆಯಿಂದ ನಿಖಿಲ್ ಕುಮಾರಸ್ವಾಮಿ ರಾಜ್ಯಪ್ರವಾಸ ಹೊರಡಲಿದ್ದಾರೆ.

ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಿಖಿಲ್ ರಾಜ್ಯ ಪ್ರವಾಸಕ್ಕೆ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ (HD Devegowda) ಹಾಗೂ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಚಾಲನೆ ನೀಡಿದರು. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಕಾಲ್ತುಳಿತ ಹಾಗೂ ವಿಮಾನ ಪತನ ದುರ್ಘಟನೆಗಳಲ್ಲಿ ಮೃತರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯ್ತು. ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದು ನಿಖಿಲ್ ಆಗಮಿಸಿದರು. ಇದನ್ನೂ ಓದಿ: Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

ಈ ವೇಳೆ ಮಾತಾಡಿದ ನಿಖಿಲ್ ಕುಮಾರಸ್ವಾಮಿ, ನಾಳೆಯಿಂದ ಜೆಡಿಎಸ್ ಪಕ್ಷಕ್ಕೆ ಹೊಸ ಯುಗ ಆರಂಭ. ಒಂದು ಛಲದೊಂದಿಗೆ ಪಕ್ಷ ಕಟ್ಟುವ ಕೆಲಸ ಕಾರ್ಯಕರ್ತರ ಜೊತೆಗೂಡಿ ಮಾಡುತ್ತೇನೆ. 58 ದಿನಗಳ ಕಾಲ ರಾಜ್ಯಾದ್ಯಂತ ಕಾರ್ಯಕರ್ತರ ಜತೆ ಹೆಜ್ಜೆ ಹಾಕುತ್ತೇನೆ. ಈ 58 ದಿನ ನಾನು ಬೆಂಗಳೂರಿಗೆ ಬರಲ್ಲ, ಕಾರ್ಯಕರ್ತರ ಜೊತೆ ಇರುತ್ತೇನೆ ಎಂದು ತಿಳಿಸಿದರು.

ವಿಧಾನಸಭೆ ಕ್ಚೇತ್ರಗಳಲ್ಲಿ ಸ್ಥಳೀಯವಾಗಿ ಏನು ಸಮಸ್ಯೆ ಇದೆ ಎಂಬುದನ್ನು ತಿಳಿದುಕೊಂಡು ಪಕ್ಷ ಅಧಿಕಾರಕ್ಕೆ ತರಲು ಪಕ್ಷದ ನಾಯಕರು, ಕಾರ್ಯಕರ್ತರ ಜತೆಗೂಡಿ ಶ್ರಮಿಸ್ತೇನೆ ಎಂದರು.

ಚಿತ್ರರಂಗದಲ್ಲಿ ವಿಷ್ಣುವರ್ಧನ್ ಅವರಿಗೆ ಅಣ್ಣನ ಸ್ಥಾನ ಕೊಟ್ಟಿದ್ದರು. ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗೆ ಜನ ಅಣ್ಣನ ಸ್ಥಾನ‌ ನೀಡಿದ್ದಾರೆ. ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೂರನೇ ಬಾರಿಗೆ ಮುಖ್ಯಮಂತ್ರಿ ಆಗಬೇಕೆಂದು ರಾಜ್ಯದ ಜನ ಬಯಸಿದ್ದಾರೆ. ಕುಮಾರಣ್ಣ ಅವರ ಆರೋಗ್ಯ ಬಗ್ಗೆ ಕಾರ್ಯಕರ್ತರು, ಜನತೆ ಪ್ರಾರ್ಥನೆ ಮಾಡಿದ್ದಾರೆ. ಕುಮಾರಣ್ಣ ಅವರಿಗೆ ದೇವೇಗೌಡರು, ಚನ್ನಮ್ಮ ಆಶೀರ್ವಾದ ಇದೆ. ರಾಜ್ಯದ ಜನರ ಆಶೀರ್ವಾದ ಇದೆ, ಈಶ್ವರನ ಕೃಪೆ ಇದೆ. ಕುಮಾರಣ್ಣ ಆರೋಗ್ಯವಾಗಿದ್ದಾರೆ ಎನ್ನುವುದು ಈ ವೇದಿಕೆ ಮೇಲೆ ಅವರನ್ನು ನೋಡಿದರೆ ಗೊತ್ತಾಗುತ್ತದೆ ಎಂದು ನಿಖಿಲ್ ಹೇಳಿದರು.

ಒಬ್ಬ ರೈತನ ಮಗನಾಗಿ ದೇಶದ ಉನ್ನತ ಹುದ್ದೆ ಅಲಂಕರಿಸಿದ ದೇವೇಗೌಡರನ್ನ ಈಶ್ವರನ ಪುತ್ರ ಎಂದೇ ಹೇಳಬಹುದು.‌ ಅವರಿಗೆ ರಾಜ್ಯದ ಬಗ್ಗೆ ಇರೋ ಬದ್ಧತೆ ಹಲವು ಜನರಿಗೆ ಮಾರ್ಗದರ್ಶನ ಆಗಿದೆ ಎಂದು ಹೆಚ್‌ಡಿಡಿ ಬಗ್ಗೆ ನಿಖಿಲ್ ಗುಣಗಾನ ಮಾಡಿದರು. ಇದನ್ನೂ ಓದಿ: ದೂಡಿದ್ದಕ್ಕೆ ಬಿತ್ತು ಪೆಟ್ಟು – ಸೀಟಿಗಾಗಿ ಅಲ್ಲ ಈಗ ಬಸ್ಸು ಹತ್ತಲು ಮಹಿಳೆಯರ ಜಗಳ!

ಇದೇ ವೇಳೆ ತಾವೇ ಮಿಸ್ಡ್‌ಕಾಲ್ ನೀಡುವ ಮೂಲಕ ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ದೇವೇಗೌಡರು ಹಾಗೂ ಕುಮಾರಸ್ವಾಮಿ (HD Kumaraswamy) ಚಾಲನೆ ನೀಡಿದರು.

Share This Article