ಮಂಡ್ಯ | ಐದು ದಿನಗಳ ಕಾವೇರಿ ಆರತಿಗೆ ತೆರೆ

Public TV
2 Min Read

ಮಂಡ್ಯ: ಕನ್ನಡ ನಾಡಿ ಜೀವ ನದಿ ಕಾವೇರಿ ಮಾತೆಗೆ ನಮನ ಸಲ್ಲಿಸುವ ನಿಟ್ಟಿನಲ್ಲಿ ಸಂಕೇತಿಕವಾಗಿ ಐದು ದಿನಗಳ ಕಾಲ ಜರುಗಿದ ಕಾವೇರಿ ಆರತಿಗೆ (Cauvery Aarti) ಇಂದು ರಾತ್ರಿ ಯಶಸ್ವಿಯಾಗಿ ತೆರೆಬಿದ್ದಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಐದು ದಿನಗಳಲ್ಲಿ ಸಾವಿರಾರು ಜನರು ಸಾಕ್ಷಿ ಆದರು.

ಸಕ್ಕರೆನಾಡು ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್ (KRS) ಡ್ಯಾಂನ ಬೃಂದಾವನ ಐದು ದಿನಗಳ ಕಾವೇರಿ ಆರತಿಯಿಂದ ಮೇಳೈಸಿತು. ಹಳೆ ಮೈಸೂರು ಭಾಗದ ಜನರಿಗೆ ನೀರುಣಿಸುವ ಕಾವೇರಿ ಮಾತೆಗೆ ನಮನ ಸಲ್ಲಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ ಕಾವೇರಿ ಆರತಿ ನೇರವೇರಿಸಬೇಕೆಂಬ ಕನಸು ಕಂಡಿದ್ದರು. ಅದರಂತೆ ಕೆಆರ್‌ಎಸ್ ಡ್ಯಾಂನ ಬೃಂದಾವನವನ್ನು ಸಾಂಕೇತಿಕವಾಗಿ ಕಳೆದ ಐದು ದಿನಗಳ ಕಾಲ ಕಾವೇರಿ ಆರತಿ ಕಾಲ ಜರುಗಿತು. ಈ ಆರತಿಗೆ ಕಳೆದ ಶುಕ್ರವಾರ ಡಿಸಿಎಂ ಡಿ.ಕೆ.ಶಿವಕುಮಾರ್ ಗೋಧೂಳಿ ಸಮಯದಲ್ಲಿ ಚಾಲನೆ ನೀಡುವ ಮೂಲಕ ಹೊಸ ಮುನ್ನುಡಿ ಬರೆದರು. ಇದನ್ನೂ ಓದಿ: ನಾಲ್ಕು ದಿನ ಕಳೆದರೂ ಪತ್ತೆಯಾಗದ 4ರ ಮಗು – ಕುಟುಂಬಸ್ಥರ ಭೇಟಿಯಾದ ಸಚಿವ ಶಿವರಾಜ ತಂಗಡಗಿ

ಬಳಿಕ ಐದು ದಿನಗಳ ಕಾಲ ಬೃಂದಾವನದಲ್ಲಿ ನಡೆದಿದ್ದು ಕಾವೇರಿ ಮಾತೆಗೆ ನಮನ ಸಲ್ಲಿಸುವ ಕಾವೇರಿ ಆರತಿ. ಐದು ದಿನಗಳಲ್ಲೂ ಮೊದಲಿಗೆ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಅರ್ಚಕರ ತಂಡ ವಾತಾಪಿ ಗಣಪತಿಂ ಭಜೆ ಮಂಗಳವಾದ್ಯದಿಂದ ಕಾವೇರಿ ಆರತಿಯನ್ನು ಪ್ರಾರಂಭಿಸಿದರು. ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ ಮಾಡಿ ಬಳಿಕ ಸಂಕಲ್ಪ ಮಾಡಲಾಯಿತು. ನಂತರ ಕಾವೇರಿ ಆರತಿಯೊಂದಿಗೆ ಸಂಪನ್ನ ಮಾಡಲಾಯಿತು. ಇದಾದ ನಂತರ ವಾರಣಾಸಿಯ ವೈದಿಕ ತಂಡದಿಂದ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನೆರವೇರಿಸಲಾಯಿತು. ಇದನ್ನೂ ಓದಿ: ಚೆನ್ನೈನಲ್ಲಿ ಕಮಾನು ಕುಸಿದು 9 ಮಂದಿ ಸಾವು – 10ಕ್ಕೂ ಹೆಚ್ಚು ಮಂದಿಗೆ ಗಾಯ

ಕೆಆರ್‌ಎಸ್‌ನ ಬೃಂದಾವನದಲ್ಲಿ ನಡೆದ ಕಾವೇರಿ ಆರತಿಗೆ ಹಲವು ಮಠಗಳ ಸ್ವಾಮೀಜಿಗಳು, ಸಚಿವರು, ಶಾಸಕರು, ಅಧಿಕಾರಿಗಳು, ಸಾವಿರಾರು ಸಂಖ್ಯೆಯ ಜನರು ಸಾಕ್ಷಿಯಾದರು. ಕಾವೇರಿ ಆರತಿಯ ಅಂತಿಮ ದಿನದಂದು ವಿನಯ್ ಗುರೂಜಿ ಸಹ ಭಾಗಿಯಾಗಿದ್ದರು. ಇದೇ ವೇಳೆ ಮಾತನಾಡಿದ ಅವರು, ಆಸ್ತಿಕರು ಹಾಗೂ ನಾಸ್ತಿಕರು ಎಲ್ಲರೂ ಸಹ ಕಾವೇರಿಗೆ ನಮನ ಸಲ್ಲಿಸುವುದು ಅವರ ಕರ್ತ್ಯವಾಗಿದೆ. ಕಾವೇರಿಯಿಂದ ಜನರು ಸುಭಿಕ್ಷವಾಗಿದೆ. ರಾಜ್ಯ ಸರ್ಕಾರ ಕಾವೇರಿ ಆರತಿ ಮಾಡುತ್ತಿರುವುದು ತುಂಬ ಒಳ್ಳೆಯ ಕೆಲಸ ಎಂದರು. ಇದನ್ನೂ ಓದಿ: ಯಾರ ಬಳಿ ಆಯುಧ ಇಲ್ಲವೋ ಅವರೆಲ್ಲಾ ಆಯುಧ ಖರೀದಿಸಿ ಪೂಜಿಸಿ: ನಾರಾಯಣ ಭಾಂಡಗೆ

Share This Article