ಅಮರನಾಥ ಯಾತ್ರೆ ಕೈಗೊಂಡಿದ್ದ ಮಾಗಡಿಯ 5 ಮಂದಿ ಸೇಫ್‌

Public TV
1 Min Read

ರಾಮನಗರ: ಅಮರನಾಥ ಯಾತ್ರೆ (Amaranath Yatra) ಕೈಗೊಂಡಿದ್ದ ರಾಮನಗರ (Ramanagara) ಜಿಲ್ಲೆ ಮಾಗಡಿ ತಾಲೂಕಿನ 5 ಮಂದಿ ಯಾತ್ರಾರ್ಥಿಗಳು ಸೇಫ್ ಆಗಿದ್ದಾರೆ. ಯಾತ್ರೆ ಕೈಗೊಂಡಿದ್ದ ಇನ್ನೂ ಅನೇಕ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಜು. 2ರಂದು ಮಾಗಡಿಯಿಂದ ಅಮರನಾಥ ಯಾತ್ರೆಗೆ ಹೋಗಿದ್ದ ಯಾತ್ರಾರ್ಥಿಗಳು ಪ್ರವಾಹಕ್ಕೂ ಮುನ್ನವೇ ಅಮರನಾಥ ದರ್ಶನ ಮುಗಿಸಿದ್ದಾರೆ. ಬಳಿಕ ಶ್ರೀನಗರದ ವೈಷ್ಣೋದೇವಿ ದರ್ಶನಕ್ಕೆ ತೆರಳಲು ಮುಂದಾದ ಯಾತ್ರಾರ್ಥಿಗಳಿಗೆ ಪ್ರವಾಹ ಅಡ್ಡಿಯಾಗಿದೆ. ಇದನ್ನೂ ಓದಿ: ಅಮರನಾಥದಲ್ಲಿ ಭಾರೀ ಮಳೆ – ಸಂಕಷ್ಟದಲ್ಲಿ ಧಾರವಾಡದ ಐವರು ಯಾತ್ರಿಗಳು

ಸದ್ಯ ಸಿಆರ್‌ಪಿಎಫ್‌ನ 46 ಕ್ಯಾಂಪ್‌ನಲ್ಲಿ ಯಾತ್ರಿಗಳಿಗೆ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಾಗಡಿಯಿಂದ ತೆರಳಿದ್ದ ಐವರು ಯಾತ್ರಾರ್ಥಿಗಳು ಸುರಕ್ಷಿತವಾಗಿರುವ ಕುರಿತು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಅಲ್ಲದೇ ರಾಜ್ಯದ ಹಲವು ಮಂದಿ ಯಾತ್ರಾರ್ಥಿಗಳು ಸಿಆರ್‌ಪಿಎಫ್‌ ಕ್ಯಾಂಪ್‌ನಲ್ಲಿ ಸುರಕ್ಷಿತವಾಗಿದ್ದು, ಕೆಲವರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಜಮ್ಮು-ಕಾಶ್ಮೀರದಲ್ಲಿರುವ ಅಮರನಾಥ ದೇವಾಲಯಕ್ಕೆ ಯಾತ್ರೆ ಕೈಗೊಂಡಿದ್ದ 80 ಕ್ಕೂ ಹೆಚ್ಚು ಮಂದಿ ಕನ್ನಡಿಗರು ಪ್ರವಾಹದ ಕಾರಣಕ್ಕೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲು ಅಗತ್ಯ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಇದನ್ನೂ ಓದಿ: ಉತ್ತರಾಖಂಡದಲ್ಲಿ ಮೇಘಸ್ಫೋಟ – ಸಂಕಷ್ಟದಲ್ಲಿ ರಾಜ್ಯದ 83 ಅಮರನಾಥ ಯಾತ್ರಿಕರು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್