ಸಂತ್ರಸ್ತರಿಗೆ ನೆರವು – ಎಂಟಿಬಿಯಿಂದ 1 ಕೋಟಿ ರೂ. ಸಹಾಯ ಧನ

Public TV
1 Min Read

ಬೆಂಗಳೂರು: ಉತ್ತರ ಕರ್ನಾಟಕಕ್ಕೆ ಸಂಭವಿಸಿರುವ ಭಾರೀ ಪ್ರವಾಹದ ಹಿನ್ನೆಲೆ ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಾಯ ಮಾಡಿ, ಸ್ಪಂದಿಸುತ್ತಿದ್ದಾರೆ. ಇದೀಗ ಜನಪ್ರತಿನಿಧಿಗಳೂ ಸಹ ಸಹಾಯ ಹಸ್ತ ಚಾಚುತ್ತಿದ್ದು, ಹೊಸಕೋಟೆಯ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂ. ಪರಿಹಾರ ಹಣವನ್ನು ನೀಡಿದ್ದಾರೆ.

ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕ ಸೇರಿದಂತೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಅನಾಹುತ ಸಂಭವಿಸಿದ್ದು, ಸಾರ್ವಜನಿಕರು ಜೀವನ ಹೇಳತೀರದಾಗಿದೆ. ಪ್ರವಾಹದಿಂದ ಮನೆ ಮಠಗಳನ್ನು ಕೆಳದುಕೊಂಡು ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆದುಕೊಂಡಿದ್ದು, ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಸಾರ್ವಜನಿಕರೂ ಸಹ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದು, ತಮ್ಮ ಶಕ್ತಿಯನ್ನು ಮೀರಿ ಸಹಾಯ ಮಾಡುತ್ತಿದ್ದಾರೆ.

ಈ ಬೆನ್ನಲ್ಲೇ ಜನಪ್ರತಿನಿಧಿಗಳೂ ಸಹ ಸಹಾಯ ಹಸ್ತ ಚಾಚುತ್ತಿದ್ದು, ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಅನರ್ಹ ಕೈ ಶಾಸಕ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂ. ಪರಿಹಾರ ಮೊತ್ತವನ್ನು ಚೆಕ್ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.

10 ದಿನಗಳ ಕಾಲ ಸುರಿದ ಭಾರೀ ಮಳೆ ಕರ್ನಾಟಕವನ್ನೇ ಮುಳುಗಿಸಿದ್ದ ಪ್ರವಾಹದಿಂದ ಉಂಟಾಗಿರುವ ನಷ್ಟ ಬರೋಬ್ಬರೀ 30 ರಿಂದ 40 ಸಾವಿರ ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಉತ್ತರ ಕರ್ನಾಟಕ, ಹೈದಾರಾಬಾದ್ ಕರ್ನಾಟಕ, ಮಲೆನಾಡು ಮತ್ತು ಕರಾವಳಿ ಭಾಗದ 17 ಜಿಲ್ಲೆಗಳಲ್ಲಿ ಪ್ರಳಯಕ್ಕೆ ಇದುವರೆಗೂ ಆಹುತಿ ಆದವರ ಸಂಖ್ಯೆ 60ಕ್ಕೆ ತಲುಪಿದೆ. 136 ಪ್ರಮುಖ ಹೆದ್ದಾರಿಗಳು ಹಾಳಾಗಿವೆ.

ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಯಡಿಯೂರಪ್ಪ ತುರ್ತಾಗಿ 10 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದಾರೆ. ಆಗಸ್ಟ್ 1ರಿಂದ ಸುರಿದಿದ್ದ ಕುಂಭದ್ರೋಣ ಮಳೆ ಉತ್ತರ ಕರ್ನಾಟಕ ಭಾಗದಲ್ಲಿ ತಗ್ಗಿದೆ. ಆದರೆ ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದಲ್ಲಿ ಇನ್ನೂ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

Share This Article
Leave a Comment

Leave a Reply

Your email address will not be published. Required fields are marked *