ಸಂಸದರ ಶಕ್ತಿಯನ್ನ ಪ್ರಶ್ನೆ ಮಾಡುವ ಹಾಗಿಲ್ಲ: ಉಮೇಶ್ ಜಾಧವ್

Public TV
1 Min Read

ನವದೆಹಲಿ: ನಮ್ಮ ಸಂಸದರ ಶಕ್ತಿಯನ್ನು ಪ್ರಶ್ನೆ ಮಾಡುವ ಹಾಗಿಲ್ಲ. ನಮ್ಮ ಶಕ್ತಿ ಏನು ಎಂಬುದನ್ನು ಜನರು ಲೋಕಸಭಾ ಚುನಾವಣೆಯಲ್ಲಿ ತೋರಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ದೆಹಲಿಯ ನಾಯಕರಿಗೆ ಏನು ಮಾಡಬೇಕು ಎಂಬ ವಿಚಾರ ಗೊತ್ತಿದೆ ಎಂದು ಸಂಸದ ಉಮೇಶ್ ಜಾಧವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನೆರೆ ಪರಿಹಾರ ನೀಡದ ಕೇಂದ್ರ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಉಮೇಶ್ ಜಾಧವ್, ಕೆಲಸ ಮಾಡಿ ಜನರಿಗೆ ಸಂಸದರ ಶಕ್ತಿಯನ್ನು ತೋರಿಸುತ್ತೇವೆ. ಪರಿಹಾರ ನೀಡುವುದರಲ್ಲಿ ಯಾವುದೇ ವಿಳಂಬವಾಗಿಲ್ಲ. ರಾಜ್ಯ ಸರ್ಕಾರದಿಂದ ವರದಿಯನ್ನು ತರಿಸಿಕೊಂಡು ದೆಹಲಿ ನಾಯಕರು ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್ ಟ್ವೀಟ್ ಸಹ ಮಾಡಿದ್ದಾರೆ. ನಾನು ಇಂದು ಹಳ್ಳಿಯಿಂದ ದೆಹಲಿಗೆ ಬಂದಿದ್ದು ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಯಾರೂ ಕಿಸೆಯಿಂದ ಪರಿಹಾರ ಕೊಡಲು ಆಗಲ್ಲ: ಪ್ರತಾಪ್ ಸಿಂಹ

ಇಷ್ಟು ದಿನ ನಾನು ಕ್ಷೇತ್ರದಲ್ಲಿ ಇದ್ದಿದ್ದರಿಂದ ಇಲ್ಲಿ ಏನಾಗಿದೆ ಎಂಬುವುದು ಗೊತ್ತಿಲ್ಲ. ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ ಮತ್ತು ಸುರೇಶ್ ಅಂಗಡಿಯವರ ಜೊತೆ ಮಾತನಾಡಿ ಮಾಹಿತಿ ಪಡೆದುಕೊಳ್ಳುತ್ತೇನೆ ಎಂದು ಉಮೇಶ್ ಜಾಧವ್ ಹಾರಿಕೆ ಉತ್ತರ ನೀಡಿದರು. ಇದನ್ನೂ ಓದಿ: ನೆರೆ ಪರಿಹಾರಕ್ಕೆ ಯಾರ ಶಿಫಾರಸ್ಸು ಬೇಕಾಗಿಲ್ಲ: ಬಿಎಸ್‍ವೈ ಕಿಡಿ

Share This Article
Leave a Comment

Leave a Reply

Your email address will not be published. Required fields are marked *