ಕರ್ಫ್ಯೂ ಉಲ್ಲಂಘಿಸಿದ್ರೆ ಕಂಡಲ್ಲಿ ಗುಂಡು – ಜನರಿಗೆ ಕೆಸಿಆರ್ ಎಚ್ಚರಿಕೆ

Public TV
1 Min Read

ಹೈದರಾಬಾದ್: ಜನರು ಕರ್ಫ್ಯೂ ಉಲ್ಲಂಘಿಸಿದರೆ ಕಂಡಲ್ಲಿ ಗುಂಡು ಹೊಡೆಯಲು ಆದೇಶ ನೀಡಲಾಗುವುದು ಎಂದು ತೆಲಂಗಾಣ ಸರ್ಕಾರ ಜನರಿಗೆ ಖಡಕ್ ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪತ್ರಿಕ್ರಿಯಿಸಿದ ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್ ರಾವ್, ಮನೆಯಿಂದ ಹೊರಬರಬೇಡಿ ಎಂದು ನಾನು ಮನವಿ ಮಾಡುತ್ತೇನೆ. ಆದರೂ ಮನೆಯಿಂದ ಹೊರ ಬರುವುದನ್ನು ನಿಲ್ಲಿಸದಿದ್ದರೆ ಕಂಡಲ್ಲಿ ಗುಂಡು ಹೊಡೆಯಲು ಆದೇಶಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಒಂದು ವೇಳೆ ಪೊಲೀಸರಿಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ಆಗದೇ ಇದ್ದರೆ ಕಂಡಲ್ಲಿ ಗುಂಡು ಹೊಡೆಯಲು ಆದೇಶವನ್ನು ನೀಡುತ್ತೇನೆ.  ಕಾನೂನು ಸುವ್ಯವಸ್ಥೆಗೆ ಸೇನೆಯನ್ನು ರಾಜ್ಯಕ್ಕೆ ತರಲು ನನಗೆ ಇಷ್ಟವಿಲ್ಲ. ಈ ರೀತಿಯ ಪರಿಸ್ಥಿತಿಗೆ ಹೋಗದೇ ಇರಲಿ ಎಂದು ಆಶಿಸೋಣ ಎಂದು ಅವರು ತಿಳಿಸಿದರು.

ವಿದೇಶದಿಂದ ಬಂದವರು ಕಡ್ಡಾಯವಾಗಿ 14 ದಿನಗಳ ಕಾಲ ಮನೆಯಲ್ಲಿರಬೇಕು. ಈ ಆದೇಶವನ್ನು ಉಲ್ಲಂಘಿಸಿದರೆ ಪಾಸ್‍ಪೋರ್ಟ್ ವಶಕ್ಕೆ ಪಡೆದು ರದ್ದು ಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತೆಲಂಗಾಣದಲ್ಲಿ ಮಂಗಳವಾರ ಒಟ್ಟು 6 ಪ್ರಕರಣಗಳು ಬೆಳಕಿಗೆ ಬಂದಿದ್ದು, ಒಟ್ಟು 39 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *