ಜನಾಂಗೀಯ ಸಂಘರ್ಷದ ಹಿಂದೆ ವಿದೇಶಗಳ ಹಸ್ತಕ್ಷೇಪ – ಮಣಿಪುರ ಸಿಎಂ ಬಿರೇನ್ ಸಿಂಗ್ ಅನುಮಾನ

Public TV
1 Min Read

ಇಂಫಾಲಾ: ಮಣಿಪುರದಲ್ಲಿ (Manipur) ನಡೆದ ಜನಾಂಗೀಯ ಸಂಘರ್ಷದ ಹಿಂದೆ ವಿದೇಶಗಳ ಹಸ್ತಕ್ಷೇಪ ಇರಬಹುದು ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್ (N Biren Singh) ಅನುಮಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಶಾಂತಿ ಭಂಗವಾಗಲು ಚೀನಾ (China) ಕಾರಣ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೇ 3 ರಿಂದ ಗುಡ್ಡಗಾಡು ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜನೆಯ ನಂತರ ರಾಜ್ಯದಲ್ಲಿ ಹಿಂಸಾಚಾರ ಶುರುವಾಗಿದೆ. ಇದು ಪೂರ್ವ ನಿಯೋಜಿತ ಇರಬಹುದು ಎಂದು ಹೇಳಿದರು.

ಮಣಿಪುರವು ಮ್ಯಾನ್ಮಾರ್‌ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಚೀನಾ ಕೂಡ ಹತ್ತಿರದಲ್ಲಿದೆ. ನಮ್ಮ ಗಡಿಗಳಲ್ಲಿ 398 ಕಿಮೀ ಕಾವಲುರಹಿತವಾಗಿದೆ. ನಮ್ಮ ಗಡಿಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಆದರೆ ದೃಢವಾದ ಮತ್ತು ವ್ಯಾಪಕವಾದ ಭದ್ರತಾ ನಿಯೋಜನೆಯು ಸಹ ಅಂತಹ ವಿಶಾಲತೆಯನ್ನು ಆವರಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಈ ತಿಂಗಳ ಉಚಿತ ವಿದ್ಯುತ್‌ ಪಡೆಯೋಕೆ ಜುಲೈ 25 ರೊಳಗೆ ನೋಂದಾಯಿಸಿಕೊಳ್ಳಿ: ಇಂಧನ ಇಲಾಖೆ ಸೂಚನೆ

ಈ ಆರೋಪವನ್ನು ನಾವು ನಿರಾಕರಿಸಲು ಅಥವಾ ದೃಢೀಕರಿಸಲು ಸಾಧ್ಯವಿಲ್ಲ. ಇದು ಪೂರ್ವ ಯೋಜಿತವೆಂದು ತೋರುತ್ತದೆ ಆದರೆ ಕಾರಣ ಸ್ಪಷ್ಟವಾಗಿಲ್ಲ. ರಾಜ್ಯದಲ್ಲಿ ಶಾಂತಿ ನೆಲೆಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದರು. ಮಾತ್ರವಲ್ಲದೆ ರಾಹುಲ್ ಗಾಂಧಿ ಭೇಟಿ ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಿಪಕ್ಷ ನಾಯಕರ ಆಯ್ಕೆ ಬಗ್ಗೆ ಕಾಂಗ್ರೆಸ್ ತಲೆ ಕೆರೆದುಕೊಳ್ಳುವುದನ್ನು ಬಿಡಲಿ: ಬಿಜೆಪಿ ತಿರುಗೇಟು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್