ಅರಣ್ಯ ಇಲಾಖೆ ಎಡವಟ್ಟು – ಪೋಸ್ಟರಿನಲ್ಲಿ ಸಿಎಂ ಸಿದ್ದರಾಮಯ್ಯ, ಅರಣ್ಯ ಸಚಿವ ರಮಾನಾಥ್ ರೈ

Public TV
1 Min Read

ಶಿವಮೊಗ್ಗ: ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಯಾರು? ಸಿದ್ದರಾಮಯ್ಯ ಅವರ ಯಡಿಯೂರಪ್ಪನವರ ಎಂಬ ಅನುಮಾನವನ್ನು ಶಿವಮೊಗ್ಗದ ವನ್ಯಜೀವಿ ವಿಭಾಗದ ಅರಣ್ಯ ಇಲಾಖೆ ಹುಟ್ಟಿಸಿದೆ.

ಶಿವಮೊಗ್ಗದ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಪ್ರವೇಶದಲ್ಲಿಯೇ ಹಸಿರು ಕರ್ನಾಟಕ ಅಭಿಯಾನ ನೀರಿಗಾಗಿ ಅರಣ್ಯ ಎಂಬ ಪೋಸ್ಟರ್ ಹಾಕಿದ್ದಾರೆ. ಈ ಪೋಸ್ಟರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಅರಣ್ಯ ಸಚಿವ ರಮಾನಾಥ್ ರೈ ಎನ್ನುವ ಭಾವಚಿತ್ರ ಹಾಕಿದ್ದಾರೆ.

ಬಹುಶಃ ಈ ಪೋಸ್ಟರ್ ಹಳೆಯದ್ದು ಇರಬಹುದು. ಆದರೆ ಪ್ರತಿನಿತ್ಯ ಅರಣ್ಯ ಕಚೇರಿಗೆ ನೂರಾರು ಮಂದಿ ಸಾರ್ವಜನಿಕರು ಬರುತ್ತಿರುತ್ತಾರೆ. ಈ ಪೋಸ್ಟರ್ ಎಲ್ಲರ ಗಮನ ಸೆಳೆಯುತ್ತಿದ್ದು, ಸಾರ್ವಜನಿಕರಿಗೆ ಗೊಂದಲ ಉಂಟು ಮಾಡುತ್ತಿದೆ. ಇನ್ನಾದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹಳೆಯ ಪೋಸ್ಟರ್ ತೆಗೆದು ಹಾಕಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *