15 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಆನೆ ದಾಳಿಗೆ ಬಲಿ

Public TV
1 Min Read

ಮಂಡ್ಯ: ಆನೆ ದಾಳಿಗೆ ಕರ್ತವ್ಯ ನಿರತ ಅರಣ್ಯ ಇಲಾಖೆಯ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಸೋಲಬ ಗ್ರಾಮದಲ್ಲಿ ನಡೆದಿದೆ.

35 ವರ್ಷದ ಮಹದೇವು ಸಾವನ್ನಪ್ಪಿದ ಅರಣ್ಯ ಇಲಾಖೆಯ ಸಿಬ್ಬಂದಿ. ಮಹದೇವು ಅವರು ಕಳೆದ 15 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ವಾಚ್‍ಮನ್ ಆಗಿ ಕೆಲಸ ಮಾಡಿಕೊಂಡಿದ್ದರು. ಇಂದು ಬೆಳಗಿನ ಜಾವ ಸುಮಾರು 4 ಗಂಟೆಗೆ ಕಾಡಿನಿಂದ ಗ್ರಾಮದತ್ತ ಆನೆಗಳು ಬರುತ್ತಿದ್ದವು.

ವಿಷಯ ತಿಳಿದು ಗ್ರಾಮದತ್ತ ಬರುತ್ತಿದ್ದ ಆನೆಗಳನ್ನು ಕಾಡಿಗಟ್ಟಲು ಸ್ಥಳಕ್ಕೆ ನಾಲ್ವರು ಅರಣ್ಯ ಸಿಬ್ಬಂದಿ ತೆರಳಿದ್ದರು. ಕತ್ತಲೆಯಲ್ಲಿ ಮಹದೇವು ಆನೆಯ ಬಳಿಯೇ ಹೋಗಿದ್ದಾರೆ. ಈ ವೇಳೆ ಆನೆ ಸೊಂಡಿಲಿನಿಂದ ಬಡಿದು ಮಹದೇವು ಅವರನ್ನು ಸಾಯಿಸಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *