ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ – ಫಾರೆಸ್ಟ್ ವಾಚರ್, ಸಂಬಂಧಿ ಬಂಧನ

Public TV
1 Min Read

ಚಾಮರಾಜನಗರ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಹಾಗೂ ಆತನ ಸಂಬಂಧಿಯನ್ನು ಬಂಧಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೋಳೆ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಅರಣ್ಯ ವೀಕ್ಷಕರೊಬ್ಬರು ತನ್ನ ಸಂಬಂಧಿಕರೊಂದಿಗೆ ಆನೆ ದಂತ ಸಾಗಿಸುತ್ತಿದ್ದ. ಆನೆ ದಂತ ಸಾಗಿಸುತ್ತಿದ್ದ ವೇಳೆ ಸಂಚಾರಿ ಅರಣ್ಯ ದಳ ಕಾರ್ಯಾಚರಣೆ ನಡೆಸಿದೆ.

ಬೈಕ್‌ನಲ್ಲಿ ಆನೆ ದಂತ ಸಾಗಿಸುತ್ತಿದ್ದ ವೇಳೆ ಮಾಲು ಸಮೇತ ಖದೀಮರು ಸಿಕ್ಕಿಬಿದ್ದಿದ್ದಾರೆ. ವಾಚರ್ ಚಂದ್ರಶೇಖರ್ ಹಾಗೂ ಬಸವರಾಜ್ ಬಂಧನವಾಗಿದೆ. ಮತ್ತೊಬ್ಬ ಆರೋಪಿ ಪುಟ್ಟಸ್ವಾಮಿ ಪರಾರಿಯಾಗಿದ್ದಾನೆ. ಅರಣ್ಯ ಸಂಚಾರಿ ದಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article