ರಸ್ತೆ ಬದಿ ಜೀವನ ನಡೆಸುತ್ತಿದ್ದ ನಿವೃತ್ತ ಆರ್ಮಿ ಕ್ಯಾಪ್ಟನ್ ಥಳಿಸಿ ಕೊಲೆ!

Public TV
1 Min Read

ಪುಣೆ: ಸೈನ್ಯದಲ್ಲಿ ಕ್ಯಾಪ್ಟನ್ ಆಗಿ ಕಾರ್ಯನಿರ್ವಹಿಸಿದ್ದ ವ್ಯಕ್ತಿಯನ್ನು ರಸ್ತೆ ಬದಿ ಬದುಕಲು ಬಿಡದೆ ದುಷ್ಕರ್ಮಿಗಳು ಹಣಕ್ಕಾಗಿ ಹಲ್ಲೆ ನಡೆಸಿ ಕೊಲೆ ಮಾಡಿರುವ ಅಮಾನವೀಯ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.

ಈ ಘಟನೆ ಗುರುವಾರ ರಾತ್ರಿ ನಡೆದಿದೆ. ಮಾಜಿ ಕ್ಯಾಪ್ಟನ್ ರವೀಂದ್ರ ಬಲಿ (67) ಕೊಲೆಯಾದ ವ್ಯಕ್ತಿ. ಕಳೆದ ರಾತ್ರಿ ದುಷ್ಕರ್ಮಿಗಳಿಬ್ಬರು ಅವರ ಜೊತೆ ಜಗಳವಾಡಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ರವಿಂದ್ರ ಅವರ ಮೇಲೆ ಹಲ್ಲೆ ನಡೆಸುತ್ತಿರುವುದನ್ನು ಸ್ಥಳೀಯ ಸೆಕ್ಯುರಿಟಿಯೊಬ್ಬರು ನೋಡಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ರವೀಂದ್ರ ಅವರು ಕಳೆದ ಕೆಲ ವರ್ಷಗಳಿಂದ ಕುಟಂಬದಿಂದ ದೂರವಿದ್ದು, ರಸ್ತೆ ಬದಿಯ ಸಣ್ಣ ಟೆಂಟ್‍ನಲ್ಲಿ ಒಬ್ಬರೇ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಕುರಿತ ಪ್ರಾಥಮಿಕ ತನಿಖೆ ವೇಳೆ ರವೀಂದ್ರ ಅವರ ಕುಟುಂಬಸ್ಥರ ಮಾಹಿತಿಯನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಪುಣೆಯ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *