ಪ್ರತೀಕಾರದ ವರ್ತನೆ ಅಲ್ಲದೆ ಇನ್ನೇನು? – ಡಿಕೆಶಿ ಪರ ಎಚ್‍ಡಿಕೆ ಬ್ಯಾಟಿಂಗ್

Public TV
1 Min Read

ಬೆಂಗಳೂರು: ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳ ವಿಚಾರಣೆ ಎದುರಿಸುತ್ತಿರುವ ಮಾಜಿ ಸಚಿವ ಡಿ.ಎ ಶಿವಕುಮಾರ್ ಪರ ಕೊನೆಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಬ್ಯಾಟಿಂಗ್ ಮಾಡಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಎಚ್‍ಡಿಕೆ, ಇಡಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೆ ಗೌರಿ-ಗಣೇಶ ಹಬ್ಬದ ದಿನದಲ್ಲೂ ವಿಚಾರಣೆ ನಡೆಸುತ್ತಿರುವ ಇಡಿ ವರ್ತನೆಗೆ ಕಿಡಿಕಾರಿದ್ದಾರೆ.

ಗೌರಿ-ಗಣೇಶ ಹಿಂದೂಗಳ ಪ್ರಮುಖ ಹಬ್ಬವಾಗಿದೆ. ಡಿಕೆ ಶಿವಕುಮಾರ್ ಅವರು ಅಧಿಕಾರಿಗಳ ಬಳಿ ಒಂದು ದಿನ ವಿಚಾರಣೆಗೆ ವಿನಾಯ್ತಿ ಕೇಳಿದರೂ ಕೊಡಲಿಲ್ಲ. ಇಡಿಯವರ ಈ ವರ್ತನೆ ಪ್ರತೀಕಾರದ ವರ್ತನೆ ಅಲ್ಲದೆ ಏನು ಎಂದು ಪ್ರಶ್ನಿಸುವ ಮೂಲಕ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮೊದಲು ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ಅವರು, ನಾಡಿನ ಜನರಿಗೆ ಗೌರಿ-ಗಣೇಶ ಹಬ್ಬದ ಶುಭ ಕೋರಿದ್ದಾರೆ. ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವ ಮೂಲಕ ಎಲ್ಲರಿಗೂ ಮಾದರಿಯಾಗೋಣ. ವಿಘ್ನ ವಿನಾಶಕನು ಎಲ್ಲರ ಬಾಳಲ್ಲೂ ಸುಖ, ಸಂತೋಷ, ಸಮೃದ್ಧಿಯನ್ನು ತರಲಿ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *