ರಾಜ್ಯ ರಾಜಕಾರಣದಲ್ಲಿ ವಿವಾದ ಎಬ್ಬಿಸಿದ ಸಿದ್ದರಾಮಯ್ಯಗೆ ಇಂದು ಅಗ್ನಿಪರೀಕ್ಷೆ!

Public TV
1 Min Read

ಬೆಂಗಳೂರು: ಸಮ್ಮಿಶ್ರ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಇರೋದು ಎಂಬ ಹೇಳಿಕೆ ನೀಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಇಂದು ಅಗ್ನಿ ಪರೀಕ್ಷೆ ಎದುರಿಸಬೇಕಿದೆ.

ಇಂದು ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಎದುರು ಸಿದ್ದರಾಮಯ್ಯ ತಮ್ಮ ಹೇಳಿಕೆಗೆ ಸಮರ್ಥನೆ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಸಂಬಂಧ ಕೈ ಕಮಾಂಡ್ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಸಿಎಂ ಜೊತೆ ಮಾತನಾಡುವಂತೆ ಸೂಚಿಸಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭ್ಯವಾಗಿವೆ. ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿಕೆಗೆ ಡೋಂಟ್ ಕೇರ್ ಅಂದ್ರು ದೇವೇಗೌಡರು!

ಸಿದ್ದರಾಮಯ್ಯ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗುವ ಸ್ಥಳ ಮತ್ತು ಸಮಯ ಮಾತ್ರ ಇನ್ನೂ ನಿಗದಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕಾರ್ಯಕ್ರಮದ ಬಗ್ಗೆ ಚರ್ಚಿಸಲು ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ. ಇಂದು ಬೆಳಗ್ಗೆ 11.30ಕ್ಕೆ ಕರೆದಿರುವ ಸಭೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರೂ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *