ಬೇಡಿಕೆ ಈಡೇರಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯರಿಂದ ಸರ್ಕಾರಕ್ಕೆ ಪತ್ರ

Public TV
1 Min Read

ಬಾಗಲಕೋಟೆ: ಸಮ್ಮಿಶ್ರ ಸರ್ಕಾರದ ಕೀ ಕಂಟ್ರೋಲ್ ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೆ ಮೂರು ಪ್ರತ್ಯೇಕ ಪತ್ರ ಬರೆದಿದ್ದಾರೆ.

ಐತಿಹಾಸಿಕ ಬಾದಾಮಿ ಪಟ್ಟಣದಲ್ಲಿ ಸರ್ಕಾರಿ ತಾಂತ್ರಿಕ ಕಾಲೇಜ್, ಕೆರೂರು ಪಟ್ಟಣದಲ್ಲಿ ಕೈಗಾಗಿರಕಾ ತರಬೇತಿ ಕೇಂದ್ರ ಸ್ಥಾಪಿಸುವಂತೆ ಕಾರ್ಮಿಕ ಸಚಿವ ವೆಂಕಟರಮಣಪ್ಪಗೆ ಪತ್ರ ಬರೆದಿದ್ದಾರೆ. ಇನ್ನು ಎಸ್‍ಎಸ್‍ಎಲ್ ಸಿ ಮುಗಿಸಿದ ಕೆರೂರು ವಿದ್ಯಾರ್ಥಿಗಳಿಗೆ ಐಟಿಐ ಕಾಲೇಜು ಹಾಗೂ ಗುಳೇದಗುಡ್ಡ ಪಟ್ಟಣದ ಸಮೀಪ ಮುರುಡಿ ಗ್ರಾಮದಲ್ಲಿ ಪಶು ವೈದ್ಯಕೀಯ ಕಾಲೇಜು ಸ್ಥಾಪಿಸುವಂತೆ ಕೋರಿ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಮೂರು ಪತ್ರದ ಮೂಲಕ ಸಿದ್ದರಾಮಯ್ಯ ಅವರು ಪ್ರತ್ಯೇಕ ಬೇಡಿಕೆಗೆ ಆಗ್ರಹಿಸಿದ್ದಾರೆ. ಮಾಜಿ ಸಿಎಂ ಅವರು ಈವರೆಗೂ ಸರ್ಕಾರಕ್ಕೆ ಒಂಟು ಎಂಟು ಪತ್ರ ಬರೆದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *