ಮಾಯಾವತಿ ಪಕ್ಷದ ಮಾಜಿ ಸಚಿವ ರಂಗನಾಥ್ ಮಿಶ್ರಾ ಬಿಜೆಪಿ ಸೇರ್ಪಡೆ

Public TV
1 Min Read

ಲಕ್ನೋ: ಉತ್ತರ ಪ್ರದೇಶದ ಮಾಜಿ ಸಚಿವ ರಂಗನಾಥ್ ಮಿಶ್ರಾ ಅವರು ಲಕ್ನೋದಲ್ಲಿ ಬಿಜೆಪಿ ಸೇರಿದ್ದಾರೆ.

ರಂಗನಾಥ್ ಮಿಶ್ರಾ ಅವರು ಮಾಯಾವತಿ ನೇತೃತ್ವದ ಬಿಎಸ್‍ಪಿ ಸರ್ಕಾರದಲ್ಲಿ 2007-2012ರ ಅವಧಿಯಲ್ಲಿ ಮಾಧ್ಯಮಿಕ ಶಿಕ್ಷಣ ಸಚಿವರಾಗಿದ್ದರು. ಸಮಾಜವಾದಿ ಪಕ್ಷದ ಮಾಜಿ ಶಾಸಕ ಮನೀಶ್ ರಾವತ್ ಅವರು ಕೂಡ ಬಿಜೆಪಿ ಸೇರಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್

Rangnath Mishra

ಸ್ವತಂತ್ರಾಬ್ಜೆಪಿ ಮತ್ತು ಸತ್ಯಕುಮಾರ್ ಅವರ ಉಪಸ್ಥಿತಿಯಲ್ಲಿ ಸಿಧೌಲಿಯ ಮಾಜಿ ಎಸ್‍ಪಿ ಶಾಸಕ, ಮನೀಶ್ ರಾವತ್, ಭದೋಹಿಯ ಬಿಎಸ್‍ಪಿ ಶಾಸಕ, ರಂಗನಾಥ್ ಮಿಶ್ರಾ ಮತ್ತು ಎಸ್‍ಪಿ ನಾಯಕ, ಡಾ. ಮನೋಜ್ ಕುಮಾರ್ ಪ್ರಜಾಪತಿ ಲಕ್ನೋದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದನ್ನೂ ಓದಿ: ಗಾಡಿ ಟೋಯಿಂಗ್ ಮಾಡ್ತಿದ್ದ ASIಗೆ ಕಲ್ಲೇಟು- ವಿಕಲಚೇತನ ಮಹಿಳೆಗೆ ಬೂಟಿನಿಂದ ಒದ್ದ ನಾರಾಯಣ್

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಾಯಕತ್ವದ ಮೇಲೆ ನಂಬಿಕೆ ಇರುವುದರಿಂದ ಮನೀಶ್ ರಾವತ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು ಮತ್ತು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಅವರು ನಾಯಕರನ್ನು ಪಕ್ಷಕ್ಕೆ ಸ್ವಾಗತಿಸಿದರು.

Share This Article
Leave a Comment

Leave a Reply

Your email address will not be published. Required fields are marked *