ಟ್ರಬಲ್ ಶೂಟರ್ ವಿಚಾರಣೆ ಖಂಡಿಸಿ ಸ್ವಕ್ಷೇತ್ರದಲ್ಲಿ ಪ್ರತಿಭಟನೆ

Public TV
1 Min Read

ರಾಮನಗರ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೇಂದ್ರ ಸರ್ಕಾರ ಇಡಿ ಅಧಿಕಾರಿಗಳ ಮೂಲಕ ವಿಚಾರಣೆ ನಡೆಸಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಜಿಲ್ಲೆಯ ಕನಕಪುರದಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಕಪುರದ ಚನ್ನಬಸಪ್ಪ ವೃತ್ತದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ರಸ್ತೆ ತಡೆ ನಡೆಸಿ ಟೈರ್ ಗೆ ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಬೇಕಂತಲೇ ಇಡಿ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಡಿಕೆಶಿಯವರನ್ನು ವಿಚಾರಣೆಗೊಳಪಡಿಸಿದ್ದಾರೆ. ಅಲ್ಲದೇ ಡಿಕೆಶಿಯವರನ್ನು ಸಂಕಷ್ಟಕ್ಕೆ ಸಿಲುಕಿಸಿದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ದುರ್ಬಲವಾಗಿದೆ ಎಂಬ ಉದ್ದೇಶದಿಂದ ಅವರಿಗೆ ಖೆಡ್ಡಾ ತೋಡಲಾಗುತ್ತಿದೆ ಎಂದು ಮಾಜಿ ಸಚಿವರ ಬೆಂಬಲಿಗರು ಆರೋಪಿಸಿದರು.

ಶುಕ್ರವಾರ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರನ್ನು ಸಂಜೆ 6 ಗಂಟೆಯಿಂದ ರಾತ್ರಿ 11.30ರ ವರಿಗೆ ವಿಚಾರಣೆ ನಡೆಸಿತ್ತು. ನಂತರ ಮತ್ತೆ ಶನಿವಾರ 11 ಗಂಟೆಗೆ ಬರುವಂತೆ ಸೂಚಿಸಿತ್ತು. ಇಡಿ ಸೂಚನೆಯಂತೆ 11 ಗಂಟೆಗೆ ಬಂದ ಡಿಕೆಶಿ ಕೆಲವು ಅಪ್ತರ ಜೊತೆ ಇಡಿ ಕಚೇರಿಯಲ್ಲಿರುವ ಪೊಲೀಸ್ ಚೌಕಿಯೊಳಗೆ ಕುಳಿತು ಮಾತನಾಡಿದ್ದಾರೆ. ನಂತರ ಈಗ ಕೆಲವು ದಾಖಲೆಯ ಜೊತೆಗೆ ಇಡಿ ಕಚೇರಿಯೊಳಗೆ ತೆರಳಿದ್ದಾರೆ.

ವಿಚಾರಣೆಯ ಎರಡನೇ ದಿನವಾದ ಇಂದು ಇಡಿ ಕಚೇರಿಯ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ತಿಂಗಳು ವಿಚಾರಣೆಗೆ ಕರೆದರೂ ನಾನು ಹಾಜರಾಗುತ್ತೇನೆ, ತನಿಖೆಗೆ ಸಹಕರಿಸುತ್ತೇನೆ ಎಂದು ತಿಳಿಸಿದ್ದಾರೆ. ನಾನು ಏನೂ ತಪ್ಪು ಮಾಡಿಲ್ಲ ನಾನು ಹೆದರಲ್ಲ. ನಾನೇ ಈ ಇದರ ಬಗ್ಗೆ ಜಾಸ್ತಿ ಯೋಚನೆ ಮಾಡುತ್ತಿಲ್ಲ. ನೀವು ಯಾಕೆ ಇಷ್ಟೊಂದು ಚಿಂತೆ ಮಾಡುತ್ತಿದ್ದಿರಾ ಎಂದು ಮಾಧ್ಯಮದವರನ್ನು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *