ರಾಯಚೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣ(H D Revanna) ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿ ವೃಂದಾವನ ದರ್ಶನ ಪಡೆದರು. ರಾಯರ ವೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮಂತ್ರಾಲಯದಲ್ಲಿ ಮಂಚಾಲಮ್ಮ ದೇವಿ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಂತ್ರಾಲಯ(Mantralaya) ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರಿಂದ ಆಶೀರ್ವಚನ ಪಡೆದರು. ಮಂತ್ರಾಕ್ಷತೆ ಫಲ ಪುಷ್ಪ ನೀಡಿ ಶ್ರೀಗಳು ಆಶೀರ್ವದಿಸಿದರು. ಈ ವೇಳೆ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಜೊತೆಗಿದ್ದರು. ಇದನ್ನೂ ಓದಿ: ಪಾಕ್ನ ಉಗ್ರವಾದದ ನಿಜ ಬಣ್ಣ ಬಯಲು ಮಾಡಲು ವಿದೇಶಕ್ಕೆ ಹೊರಟ ಸರ್ವಪಕ್ಷಗಳ ನಿಯೋಗ
ಇದಕ್ಕೂ ಮುನ್ನ ರಾಯಚೂರಿನಲ್ಲಿ(Raichur) ಮಾತನಾಡಿದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು, ಇವತ್ತು ಕೆಲ ಶಕ್ತಿಗಳನ್ನ ದಮನ ಮಾಡಬೇಕು ಅಂದ್ರೆ ದೇವರ ಹತ್ರ ಹೋಗಬೇಕಲ್ಲ. ಆ ಕೆಲಸ ಮಾಡುತ್ತಿದ್ದೇನೆ ಹೀಗಾಗಿ ಮಂತ್ರಾಲಯಕ್ಕೆ ಹೊರಟಿದ್ದೇನೆ ಎಂದು ಹೇಳಿದ್ದರು.