ಹೈಕಮಾಂಡ್ ಸೂಚನೆ ಬೆನ್ನಲ್ಲೇ ಚುನಾವಣಾ ಪ್ರಚಾರದಿಂದ ಹಿಂದೆ ಸರಿದ ರೆಡ್ಡಿ!

Public TV
1 Min Read

ಚಿತ್ರದುರ್ಗ: ಬಹಿರಂಗ ಪ್ರಚಾರದಲ್ಲಿ ಭಾಗವಹಿಸದಂತೆ ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ಮಾಜಿ ಸಚಿವ, ಗಣಿಧಣಿ ಗಾಲಿ ಜನಾರ್ದನ ರೆಡ್ಡಿಯವರು ಚುನಾವಣಾ ಪ್ರಚಾರದಿಂದ ಹಿಂದೆ ಸರಿದಿದ್ದಾರೆ.

ಸೂಚನೆ ಸಿಕ್ಕ ಕೂಡಲೇ ತನ್ನ ಕುಚುಕು ಗೆಳೆಯ ಶ್ರೀರಾಮುಲು ಪರ ಮೊಳಕಾಲ್ಮೂರಿನ ಪ್ರಚಾರದಿಂದ ಹಿಂದೆ ಸರಿದಿದ್ದಾರೆ. ಒಂದು ವಾರದಿಂದ ರಾಮುಲು ಪರ ಭರ್ಜರಿ ಪ್ರಚಾರ ನಡೆಸಿದ್ದರು. ಅಲ್ಲದೇ ರಾಮುಲು ಗೆಲ್ಲಿಸುವಲ್ಲಿ ಮಾಸ್ಟರ್ ಪ್ಲಾನ್ ಸಹ ಮಾಡುತ್ತಿದ್ದರು. ಇದನ್ನೂ ಓದಿ: ಸ್ನೇಹಿತರ ಗೆಲುವಿಗಾಗಿ ಫೀಲ್ಡ್ ಗಿಳಿದ ಜನಾರ್ದನ ರೆಡ್ಡಿಗೆ ಬ್ರೇಕ್!

ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾನುವಾರ ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರಿಗೆ ಮುಜುಗರ ತಪ್ಪಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ರೆಡ್ಡಿಯವರು ಶುಕ್ರವಾರ ಸಂಜೆಯಿಂದ ಹಾನಗಲ್ ಮನೆಯಿಂದ ಹೊರಗೆ ಕಾಣಿಸಿಕೊಂಡಿಲ್ಲ. ಆದ್ರೆ ರೆಡ್ಡಿಯವರು ಮೊಳಕಾಲ್ಮೂರು ಮನೆಯಲ್ಲಿಯೇ ಇದ್ದಾರೆ ಅಂತ ಬೆಂಬಲಿಗರು ಬಿಂಬಿಸುತ್ತಿದ್ದಾರೆ. ಇದನ್ನೂ ಓದಿ:  ಪೊಲೀಸರು ತೊಂದ್ರೆ ಕೊಟ್ರೆ ಫೋನ್ ಮಾಡಿ- ನನ್ನ ನಂಬರ್ ತಗೊಳ್ಳಿ ಅಂದ್ರು ಶಾ

ಜನಾರ್ದನ ರೆಡ್ಡಿ ಬೆಂಗಳೂರಿಗೆ ತೆರಳಿದ್ದಾರೆ ಎಂಬ ಇನ್ನೊಂದು ಮಾಹಿತಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭಿಸಿದೆ.

Share This Article
Leave a Comment

Leave a Reply

Your email address will not be published. Required fields are marked *