ಮೋದಿಗೆ ಅಮೆರಿಕದಲ್ಲಿ ಬುದ್ಧ ಬೇಕು, ಭಾರತದಲ್ಲಿ ಯುದ್ಧ ಬೇಕು: ಮಹದೇವಪ್ಪ ಕಿಡಿ

Public TV
1 Min Read

ಮಂಡ್ಯ: ಟಿಪ್ಪು ಸುಲ್ತಾನ್ ಜಯಂತಿಯನ್ನು ವಿರೋಧಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಸಿ ಮಹದೇವಪ್ಪ ಕಿಡಿಕಾರಿದ್ದು, ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಮೆರಿಕದಲ್ಲಿ ಬುದ್ಧ ಬೇಕು, ಭಾರತದಲ್ಲಿ ಯುದ್ಧ ಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಸುಲ್ತಾನ್ ರಾಜ್ಯದಲ್ಲಿ ಮೊದಲ ಬಾರಿಗೆ ಭೂ ಸುಧಾರಣೆಯನ್ನ ಜಾರಿಗೆ ತಂದ ವ್ಯಕ್ತಿ. ಆತ ದೇಶದ ಸ್ವಾತಂತ್ರ್ಯ ಸೇನಾನಿ. ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಒಬ್ಬ ಶ್ರೀಮಂತನಿಗೂ ಜಮೀನು ಕೊಟ್ಟಿರಲಿಲ್ಲ. ದೇವದಾಸಿ ಪದ್ಧತಿಯನ್ನು ಅಳಿಸಿ ಹಾಕಿ ರೇಷ್ಮೆ ಕೃಷಿಯನ್ನು ಪರಿಚಯಿಸಿದ್ದ. ವಾಣಿಜ್ಯ ವಹಿವಾಟಿಗಾಗಿ ಹರಿಹರ, ಗುಬ್ಬಿಯನ್ನು ಕೇಂದ್ರವನ್ನಾಗಿ ಮಾಡಿಕೊಂಡಿದ್ದ. ಶೃಂಗೇರಿಯ ಶಾರದಾ ಪೀಠದಲ್ಲಿ ಮರಾಠರು ದಾಳಿ ಮಾಡಿ ಚಿನ್ನದ ಕಳಶವನ್ನು ಹೋತ್ತುಕೊಂಡು ಹೋಗಿದ್ದರು. ಆಗ ಟಿಪ್ಪು ಮರಾಠರ ವಿರುದ್ಧ ಹೋರಾಡಿ ಚಿನ್ನದ ಕಳಸವನ್ನು ಮತ್ತೆ ಶೃಂಗೇರಿ ಮಠಕ್ಕೆ ತಂದು ಕೊಟ್ಟಿದ್ದ ಎಂದು ಹೇಳಿದರು. ಇದನ್ನೂ ಓದಿ: ಟಿಪ್ಪು ಕಾಲದಲ್ಲಿರುತ್ತಿದ್ದರೆ ಅಬ್ದುಲ್ ಸಿದ್ದರಾಮಯ್ಯ ಆಗ್ತಿದ್ರು- ಅಶೋಕ್

ಹಿಂದೂ ಮತಾಂದರು ಈಗ ಮತಾಂದ ಕೆಲಸಕ್ಕೆ ಕೈ ಹಾಕಿದ್ದಾರೆ. ಟಿಪ್ಪು ಅಂತಹ ಚಾರಿತ್ರಿಕ ಪುರಷನನ್ನು ಚರಿತ್ರೆಯಿಂದ ಹೋಗಲಾಡಿಸಲು ಮುಂದಾಗಿದ್ದಾರೆ. ಹಾಗೆಯೇ ರಾಜ್ಯ ಸರ್ಕಾರ ಬೌದ್ಧಿಕ ದಿವಾಳಿಯಿಂದ ಟಿಪ್ಪುವನ್ನು ಪಠ್ಯದಿಂದ ತೆಗೆಯಲು ಮುಂದಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಜೆಪಿಗೆ ಟಿಪ್ಪು ಬೇಡ, ಬಿಎಸ್‍ವೈ ಜೈಲಿಗೆ ಹೋದ ವಿಚಾರವನ್ನು ಮಕ್ಕಳು ಓದಬೇಕಿದೆ – ತನ್ವೀರ್ ಸೇಠ್

Share This Article
Leave a Comment

Leave a Reply

Your email address will not be published. Required fields are marked *