ಭಾಲ್ಕಿ ಕಣಜಿಯಲ್ಲಿ ಮಾಜಿ ಶಾಸಕ ಮೊಳಕೇರಿ ಮೂರ್ತಿ ಅನಾವರಣ

Public TV
1 Min Read

ಬೀದರ್: ಮಾಜಿ ಶಾಸಕ ದಿ.ಕಲ್ಯಾಣರಾವ್ ಮೊಳಕೇರಿ (Kalyan Rao Molakeri) ಅವರ ಮೂರ್ತಿಯನ್ನು (Statue) ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಇಂದು ಭಾಲ್ಕಿ (Bhalki) ತಾಲ್ಲೂಕಿನ ಕಣಜಿ ಗ್ರಾಮದಲ್ಲಿ ಅನಾವರಣಗೊಳಿಸಿದರು.

ನಿಧನರಾಗಿ 30 ವರ್ಷ ಕಳೆದರೂ ಕಲ್ಯಾಣರಾವ್ ಮೊಳಕೇರಿ ಅವರು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರು ಜನನಾಯಕ, ದೇಶ ಭಕ್ತ ಆಗಿದ್ದರು ಎಂದು ಬಣ್ಣಿಸಿದರು. ಇದನ್ನೂ ಓದಿ: ಆರೋಪ ಮಾಡಿ ಓಡಿ ಹೋಗುವ ಬಹಳ ಮಂದಿಯನ್ನು ನೋಡಿದ್ದೇನೆ: ಡಿಕೆ ಸುರೇಶ್

ಕಲ್ಯಾಣರಾವ್ ಆದರ್ಶ ರಾಜಕಾರಣಿ ಆಗಿದ್ದರು. ಅವರ ಕುರಿತು ಕೃತಿ ರಚಿಸಿರುವುದು ಪ್ರಶಂಸನೀಯ ಎಂದು ಸಾಹಿತಿ ಪಂಚಾಕ್ಷರಿ ಪುಣ್ಯಶೆಟ್ಟಿ ರಚಿತ ಜನನಾಯಕ ಕಲ್ಯಾಣರಾವ್ ಮೊಳಕೇರಿ ಕೃತಿ ಬಿಡುಗಡೆ ಮಾಡಿದ ಹಿರಿಯ ಪತ್ರಕರ್ತ ಶಿವಶರಣಪ್ಪ ವಾಲಿ ನುಡಿದರು.

ಕೃತಿಯಲ್ಲಿ ಲೇಖಕರು ಮೊಳಕೇರಿ ಅವರ ಜೀವನ ಹಾಗೂ ಸಾಧನೆ ಮೇಲೆ ಬೆಳಕು ಚೆಲ್ಲಿದ್ದಾರೆ. ಸಂಕ್ಷಿಪ್ತದಲ್ಲೇ ಸಮಗ್ರ ಮಾಹಿತಿ ಒದಗಿಸಿದ್ದಾರೆ ಎಂದು ಕೃತಿ ಕುರಿತು ಡಾ. ರಾಮಚಂದ್ರ ಗಣಾಪುರ ಹೇಳಿದರು.

ಕಲ್ಯಾಣರಾವ್ ಅವರು ನಿಸ್ವಾರ್ಥ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದರು. ಅವರು ನಮ್ಮಿಂದ ಮರೆಯಾಗದಿರಲಿ ಎನ್ನುವ ಕಾರಣಕ್ಕೆ ಕೃತಿ ರಚಿಸಿದ್ದೇನೆ ಎಂದು ಪಂಚಾಕ್ಷರಿ ಪುಣ್ಯಶೆಟ್ಟಿ ತಿಳಿಸಿದರು.

 

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್