ಒಂದು ತಿಂಗಳ ಹಿಂದೆ ಅನಾರೋಗ್ಯಕ್ಕೆ ಗುರಿಯಾಗಿದ್ದ ರಮ್ಯಾ ವಿದೇಶಿ ಪ್ರವಾಸ!

Public TV
1 Min Read

– ದುಬೈ ಪ್ರವಾಸ ಫೋಟೋ ವೈರಲ್

ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಗೆ ಆಗಮಿಸದೇ ಭಾರೀ ಚರ್ಚೆಗೆ ಕಾರಣವಾಗಿದ್ದ ಮಂಡ್ಯದ ಮಾಜಿ ಸಂಸದೆ ರಮ್ಯಾ ಅನಾರೋಗ್ಯದ ನೆಪ ಹೇಳಿ ಅನುಕಂಪ ಗಿಟ್ಟಿಸಿಕೊಂಡಿದ್ದರು. ಆದರೆ ಈಗ ದಿಢೀರ್ ಆಗಿ ದುಬೈನಲ್ಲಿ ಕಾಣಿಸಿಕೊಂಡಿದ್ದಾರೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾರ್ಯಕ್ರಮದ ನಿಮಿತ್ತ ಇಂದು ಮಧ್ಯಾಹ್ನ ದುಬೈಗೆ ಭೇಟಿ ನೀಡಿದ್ದಾರೆ. ಹೀಗಾಗಿ ಒಂದು ದಿನ ಮೊದಲೇ ದುಬೈಗೆ ಬಂದಿರುವ ರಮ್ಯಾ, ರಾಹುಲ್ ಗಾಂಧಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಿಕೊಂಡಿದ್ದಾರೆ. ಕೆಲ ಹೊತ್ತು ದುಬೈನ ಬೀಚ್‍ನಲ್ಲಿ ತಿರುಗಾಡಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಇದನ್ನು ಓದಿ: ರಮ್ಯಾಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಮಂಡ್ಯ ಜನತೆ

ನಟಿ ರಮ್ಯಾ ದುಬೈನಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂಬರೀಷ್ ಅಂತ್ಯಕ್ರಿಯೆಗೆ ಬಾರದೆ ಅನಾರೋಗ್ಯದ ನೆಪ ಹೇಳಿ ರಮ್ಯಾ ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಒಂದು ತಿಂಗಳಿನಲ್ಲೇ ಮಾರಕ ಕಾಯಿಲೆ ಗುಣಮುಖವಾಗಿದೆಯೇ ಎಂದೆಲ್ಲ ಪ್ರಶ್ನಿಸಿ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.  ಇದನ್ನು ಓದಿ: ಮಂಡ್ಯ ಮನೆಯನ್ನು ರಾತ್ರೋರಾತ್ರಿ ಖಾಲಿ ಮಾಡಿದ್ದಕ್ಕೆ ಕಾರಣ ತಿಳಿಸಿದ ರಮ್ಯಾ

ನಾನು ಆಸ್ಟಿಯೋಕ್ಲ್ಯಾಟೋಮಾ (Osteoclastoma) ಎಂಬ ಕಾಯಿಲೆಯಿಂದ ಬಳಲುತ್ತಿದ್ದೇನೆ. ಆಸ್ಟಿಯೋಕ್ಲ್ಯಾಟೋಮಾ ಎನ್ನುವುದು ಮೂಳೆಗಳಿಗೆ ಸಂಬಂಧಿಸಿದ ರೋಗವಾಗಿದೆ. ನನ್ನ ಕಾಲಿನ ಎಲುಬುಗಳ ನಡುವೆ ಉಂಟಾಗಿರುವ ಸಮಸ್ಯೆ ಇದಾಗಿದ್ದು, ಕೊಂಚ ನಿರ್ಲಕ್ಷ್ಯ ವಹಿಸಿದ್ರು ಮಾರಕ ಕಾಯಿಲೆ ಕ್ಯಾನ್ಸರ್ ಗೆ ತುತ್ತಾಗುತ್ತಿದ್ದೆ. ಹೀಗಾಗಿ ಚಿಕಿತ್ಸೆ ಪಡೆದು ಅಕ್ಟೊಬರ್ ನಿಂದ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ರಮ್ಯಾ ತಿಳಿಸಿದ್ದರು. ಇದನ್ನು ಓದಿ: ಸ್ಯಾಂಡಲ್‍ವುಡ್ ಕ್ವೀನ್‍ಗೆ ಫುಲ್‍ಕ್ಲಾಸ್- ರಮ್ಯಾ ಬರ್ತ್ ಡೇ ನಮ್ಗೆ ಕರಾಳ ದಿನವೆಂದ್ರು ಅಭಿಮಾನಿ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *